ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ಗೆ ಬಹಳಷ್ಟು ಮಂದಿ ಆಕಾಂಕ್ಷಿಗಳಿದ್ದರು. ಆದರೆ, ದಿವಂಗತ ಸುರೇಶ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ನೀಡುವ ಮೂಲಕ ಆ ಪಕ್ಷದ ಹೈಕಮಾಂಡ್ ಎಲ್ಲ ಆಕಾಂಕ್ಷಿಗಳ ಬಾಯಿಯನ್ನು ಮುಚ್ಚಿಸಿದೆ. ಜಾಣ್ಮೆಯ ನಡೆಯ ಮೂಲಕ, ಪಕ್ಷದಲ್ಲಿ ಭಿನ್ನಮತಕ್ಕೆ ಅವಕಾಶ ಆಗದಂತೆ ನೋಡಿಕೊಂಡಿದೆ.