ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು ಸ್ಫೋಟಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ: ಡಿಜಿಪಿ

Last Updated 20 ನವೆಂಬರ್ 2022, 9:58 IST
ಅಕ್ಷರ ಗಾತ್ರ

ಮಂಗಳೂರು: ನಗರದ ಗರೋಡಿಯಲ್ಲಿ ಆಟೊರಿಕ್ಷಾದಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಪೋಟ ಪ್ರಕರಣಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಭಾನುವಾರ ಟ್ವೀಟ್‌ ಮಾಡಿರುವ ಅವರು, ‘ಪ್ರೇಮರಾಜ್‌ ದಾಖಲೆಗಳು ಕಳವಾಗಿದ್ದವು. ಅವರಿಗೂ ಈ ಸ್ಫೋಟ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಕೃತ್ಯದ ಸ್ಥಳದಲ್ಲಿ ಪ್ರೇಮರಾಜ್‌ ಹುಟಗಿ ಅವರ ಆಧಾರ್‌ ಕಾರ್ಡ್‌ ಪತ್ತೆಯಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತಿರಿಸಿದ್ದವು.

ಸ್ಫೋಟ ಸಂಭವಿಸುವಾಗ ರಿಕ್ಷಾದಲ್ಲಿದ್ದ ಪ್ರಯಾಣಿಕನ ಹೆಸರನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT