ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ನಾರಾಯಣಗೌಡ, ‘ಮಾವನ್ನು ಮರದಿಂದ ಕೆಳಗೆ ಬೀಳದಂತೆ ಎಚ್ಚರಿಕೆಯಿಂದ ಕಟಾವು ಮಾಡಿ, ನೈಸರ್ಗಿಕವಾಗಿ ಹಣ್ಣನ್ನು ಮಾಗಿಸುವ ವಿಧಾನವನ್ನು ಬೆಳೆಗಾರರು ಅನುಸರಿಸುತ್ತಿದ್ದಾರೆ. ಇದರಿಂದ ಹಣ್ಣು ಉತ್ತಮ ಗುಣಮಟ್ಟದಿಂದ ಕೂಡಿರುವುದರ ಜೊತೆಗೆ ದರವೂ ಹೆಚ್ಚಿಸಬಹುದು. ಇದಕ್ಕಾಗಿ ಸಂಘವು ಬೆಳೆಗಾರರ ಬೆಂಬಲಕ್ಕೆ ನಿಂತಿದೆ’ ಎಂದರು.