ಈ ಸಂಬಂಧ ಪತ್ರ ಬರೆದಿರುವ ಅವರು ‘ಈ ಬಾರಿ ಹಿಂದಿ ಹಾಗೂ ಇಂಗ್ಲಿಷ್ನಲ್ಲೇ ಪರೀಕ್ಷೆ ನಡೆಸಲು ಐಬಿಪಿಎಸ್ ನಿರ್ಧರಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೋದ ವರ್ಷ ಸಂಸತ್ತಿನಲ್ಲಿ ನೀಡಿದ್ದ ಭರವಸೆಗೆ ತದ್ವಿರುದ್ಧವಾದ ನಡೆ ಇದಾಗಿದೆ. ಇದರಿಂದ ಕನ್ನಡ ಮತ್ತು ಇತರ ಪ್ರಾದೇಶಿಕ ಭಾಷೆ ಮತ್ತು ಭಾಷಿಕರಿಗೆ ಅನ್ಯಾಯವಾಗುತ್ತದೆ. ಕೇವಲ ಹಿಂದಿ ಭಾಷಿಕರಿಗೆ ಅನುಕೂಲ ಮಾಡಿಕೊಡುವ ದುರುದ್ದೇಶ ಇದರ ಹಿಂದೆ ಅಡಕವಾಗಿದೆ. ಕೇಂದ್ರ ಸರ್ಕಾರವು ಹೀಗೆ ನಿರಂತರವಾಗಿ ಹಿಂದಿ ಹೇರುತ್ತಿರುವುದು ಖಂಡನಾರ್ಹ’ ಎಂದಿದ್ದಾರೆ.