<p><strong>ಬೆಂಗಳೂರು:</strong> ಕೃಷಿ ಕಾಯ್ದೆಗಳನ್ನುವಿರೋಧಿಸಿ ರೈತ ಸಂಘಟನೆಗಳು ಸೋಮವಾರ ಕರೆ ನೀಡಿರುವ ಭಾರತ ಬಂದ್ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.</p>.<p>‘ಬಂದ್ಗೆ ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ. ಈ ಬಂದ್ ದೇಶದೆಲ್ಲೆಡೆ ಪ್ರಜಾಸತ್ತಾತ್ಮಕ ಹೋರಾಟಗಳ ಹೊಸ ಪರ್ವಕ್ಕೆ ನಾಂದಿ ಹಾಡಲಿದೆ’ ಎಂದು ವೇದಿಕೆ ಅಧ್ಯಕ್ಷ ಬಿ.ಆರ್. ಮಂಜುನಾಥ್ ತಿಳಿಸಿದ್ದಾರೆ.</p>.<p>‘ಕೇಂದ್ರ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನುಅನುಸರಿಸುತ್ತಿದೆ. ಜನವಿರೋಧಿ<br />ಶಿಕ್ಷಣ ನೀತಿ ಜಾರಿಗೊಳಿಸಲು ಮುಂದಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Subhead">ವಾಹನಗಳ ಸಂಚಾರಕ್ಕೆ ಒತ್ತಾಯ ಇಲ್ಲ: ‘ರೈತರ ಹೋರಾಟಕ್ಕೆ ಬೆಂಬಲ ಇದೆ. ಆದರೆ, ವಾಹನಗಳ ಸಂಚಾರ ಸ್ಥಗಿತ<br />ಗೊಳಿಸುವಂತೆ ಯಾರನ್ನು ಒತ್ತಾಯಿಸುವುದಿಲ್ಲ’ ಎಂದು ಕರ್ನಾಟಕ ರಾಜ್ಯ ಖಾಸಗಿ ವಾಹನಗಳ ಚಾಲಕರ ಸಂಘದ ಅಧ್ಯಕ್ಷ ಪುಟ್ಟಲಿಂಗಯ್ಯತಿಳಿಸಿದ್ದಾರೆ.</p>.<p>‘ಎರಡು ಲಾಕ್ಡೌನ್ಗಳಿಂದ ತತ್ತರಿಸಿದ್ದೇವೆ. ಸಾಲದ ಹೊರೆ ಹೆಚ್ಚಾಗಿದೆ. ಪೆಟ್ರೋಲ್,ಡೀಸೆಲ್ ದರವೂ ಹೆಚ್ಚಾ<br />ಗಿದೆ. ಇಂತಹ ಪರಿಸ್ಥಿತಿಯಲ್ಲಿ ಒಂದು ದಿನ ದುಡಿಮೆ ನಿಲ್ಲಿಸಿದರೆ ಕಷ್ಟ ವಾಗುತ್ತದೆ. ರೈತರ ಹೋರಾಟಕ್ಕೆ ನೈತಿಕ ಬೆಂಬಲ ನೀಡುತ್ತೇವೆ’ ಎಂದು ಒಲಾ–ಉಬರ್ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಹೇಳಿದ್ದಾರೆ.</p>.<p class="Subhead">‘ಹೋಟೆಲ್ ಬಂದ್ ಮಾಡಿದರೆ ರೈತರಿಗೆ ನಷ್ಟ’: ‘ಬಂದ್ಗೆ ಬೆಂಬಲ ಇಲ್ಲ. ಕೃಷಿ ಉತ್ಪನ್ನಗಳ ಮೇಲೆಯೇ ಹೋಟೆಲ್ ಉದ್ಯಮ ಅವಲಂಬಿತವಾಗಿರುವುದರಿಂದ ಹೋಟೆಲ್ಗಳನ್ನು ಬಂದ್ ಮಾಡಿದರೆ ರೈತರಿಗೆ ನಷ್ಟವಾಗುತ್ತದೆ’ ಎಂದು ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘದ ಅಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ.</p>.<p>‘ಸೋಮವಾರ ಎಲ್ಲ ಹೋಟೆಲ್ಗಳು ತೆರೆದಿರುತ್ತವೆ. ಆದರೆ, ರೈತರಿಗೆ ನಾವು ಸದಾ ಬೆಂಬಲ ನೀಡುತ್ತಾ ಬಂದಿದ್ದೇವೆ. ರೈತ ಸಮುದಾಯದ ಜತೆ ಅನ್ಯೋನ್ಯ ಸಂಬಂಧ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.</p>.<p><strong>***</strong></p>.<p>ಬಂದ್ಗೆ ನೈತಿಕ ಬೆಂಬಲ ಮಾತ್ರ ನೀಡಲಾಗಿದೆ. ಸ್ವಯಂ ನಿರ್ಧಾರ ಕೈಗೊಳ್ಳುವಂತೆ ಆಟೋ ಚಾಲಕರಿಗೆ ತಿಳಿಸಿದ್ದೇವೆ.</p>.<p><strong>- ರುದ್ರಮೂರ್ತಿ, ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಅಧ್ಯಕ್ಷ</strong></p>.<p><strong>***</strong></p>.<p>ನಾವು ರೈತರ ಮಕ್ಕಳಾಗಿ ಬಂದ್ಗೆ ನೈತಿಕ ಬೆಂಬಲ ಕೊಡುತ್ತೇವೆ. ಆದರೆ, ಬಸ್ಗಳ ಸಂಚಾರಕ್ಕೆ ಯಾವುದೇ ರೀತಿ ಅಡ್ಡಿ ಮಾಡುವುದಿಲ್ಲ. ನಾಲ್ಕು ನಿಗಮಗಳಲ್ಲಿ ಬಸ್ಗಳ ಸಂಚಾರಕ್ಕೆ ವ್ಯತ್ಯಯವಾಗುವುದಿಲ್ಲ.</p>.<p><strong>- ಆರ್. ಚಂದ್ರಶೇಖರ್, ಸಾರಿಗೆ ನೌಕರರ ಕೂಟದ ಅಧ್ಯಕ್ಷ</strong></p>.<p><strong>***</strong></p>.<p>ಬಿಎಂಟಿಸಿ ಬಸ್ಗಳ ಸಂಚಾರದಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ. ಬಸ್ಗಳ ಸೇವೆ ಎಂದಿನಂತೆ ಇರಲಿದೆ.</p>.<p><strong>- ವಿ. ಅನ್ಬುಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೃಷಿ ಕಾಯ್ದೆಗಳನ್ನುವಿರೋಧಿಸಿ ರೈತ ಸಂಘಟನೆಗಳು ಸೋಮವಾರ ಕರೆ ನೀಡಿರುವ ಭಾರತ ಬಂದ್ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.</p>.<p>‘ಬಂದ್ಗೆ ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ. ಈ ಬಂದ್ ದೇಶದೆಲ್ಲೆಡೆ ಪ್ರಜಾಸತ್ತಾತ್ಮಕ ಹೋರಾಟಗಳ ಹೊಸ ಪರ್ವಕ್ಕೆ ನಾಂದಿ ಹಾಡಲಿದೆ’ ಎಂದು ವೇದಿಕೆ ಅಧ್ಯಕ್ಷ ಬಿ.ಆರ್. ಮಂಜುನಾಥ್ ತಿಳಿಸಿದ್ದಾರೆ.</p>.<p>‘ಕೇಂದ್ರ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನುಅನುಸರಿಸುತ್ತಿದೆ. ಜನವಿರೋಧಿ<br />ಶಿಕ್ಷಣ ನೀತಿ ಜಾರಿಗೊಳಿಸಲು ಮುಂದಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Subhead">ವಾಹನಗಳ ಸಂಚಾರಕ್ಕೆ ಒತ್ತಾಯ ಇಲ್ಲ: ‘ರೈತರ ಹೋರಾಟಕ್ಕೆ ಬೆಂಬಲ ಇದೆ. ಆದರೆ, ವಾಹನಗಳ ಸಂಚಾರ ಸ್ಥಗಿತ<br />ಗೊಳಿಸುವಂತೆ ಯಾರನ್ನು ಒತ್ತಾಯಿಸುವುದಿಲ್ಲ’ ಎಂದು ಕರ್ನಾಟಕ ರಾಜ್ಯ ಖಾಸಗಿ ವಾಹನಗಳ ಚಾಲಕರ ಸಂಘದ ಅಧ್ಯಕ್ಷ ಪುಟ್ಟಲಿಂಗಯ್ಯತಿಳಿಸಿದ್ದಾರೆ.</p>.<p>‘ಎರಡು ಲಾಕ್ಡೌನ್ಗಳಿಂದ ತತ್ತರಿಸಿದ್ದೇವೆ. ಸಾಲದ ಹೊರೆ ಹೆಚ್ಚಾಗಿದೆ. ಪೆಟ್ರೋಲ್,ಡೀಸೆಲ್ ದರವೂ ಹೆಚ್ಚಾ<br />ಗಿದೆ. ಇಂತಹ ಪರಿಸ್ಥಿತಿಯಲ್ಲಿ ಒಂದು ದಿನ ದುಡಿಮೆ ನಿಲ್ಲಿಸಿದರೆ ಕಷ್ಟ ವಾಗುತ್ತದೆ. ರೈತರ ಹೋರಾಟಕ್ಕೆ ನೈತಿಕ ಬೆಂಬಲ ನೀಡುತ್ತೇವೆ’ ಎಂದು ಒಲಾ–ಉಬರ್ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಹೇಳಿದ್ದಾರೆ.</p>.<p class="Subhead">‘ಹೋಟೆಲ್ ಬಂದ್ ಮಾಡಿದರೆ ರೈತರಿಗೆ ನಷ್ಟ’: ‘ಬಂದ್ಗೆ ಬೆಂಬಲ ಇಲ್ಲ. ಕೃಷಿ ಉತ್ಪನ್ನಗಳ ಮೇಲೆಯೇ ಹೋಟೆಲ್ ಉದ್ಯಮ ಅವಲಂಬಿತವಾಗಿರುವುದರಿಂದ ಹೋಟೆಲ್ಗಳನ್ನು ಬಂದ್ ಮಾಡಿದರೆ ರೈತರಿಗೆ ನಷ್ಟವಾಗುತ್ತದೆ’ ಎಂದು ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘದ ಅಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ.</p>.<p>‘ಸೋಮವಾರ ಎಲ್ಲ ಹೋಟೆಲ್ಗಳು ತೆರೆದಿರುತ್ತವೆ. ಆದರೆ, ರೈತರಿಗೆ ನಾವು ಸದಾ ಬೆಂಬಲ ನೀಡುತ್ತಾ ಬಂದಿದ್ದೇವೆ. ರೈತ ಸಮುದಾಯದ ಜತೆ ಅನ್ಯೋನ್ಯ ಸಂಬಂಧ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.</p>.<p><strong>***</strong></p>.<p>ಬಂದ್ಗೆ ನೈತಿಕ ಬೆಂಬಲ ಮಾತ್ರ ನೀಡಲಾಗಿದೆ. ಸ್ವಯಂ ನಿರ್ಧಾರ ಕೈಗೊಳ್ಳುವಂತೆ ಆಟೋ ಚಾಲಕರಿಗೆ ತಿಳಿಸಿದ್ದೇವೆ.</p>.<p><strong>- ರುದ್ರಮೂರ್ತಿ, ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಅಧ್ಯಕ್ಷ</strong></p>.<p><strong>***</strong></p>.<p>ನಾವು ರೈತರ ಮಕ್ಕಳಾಗಿ ಬಂದ್ಗೆ ನೈತಿಕ ಬೆಂಬಲ ಕೊಡುತ್ತೇವೆ. ಆದರೆ, ಬಸ್ಗಳ ಸಂಚಾರಕ್ಕೆ ಯಾವುದೇ ರೀತಿ ಅಡ್ಡಿ ಮಾಡುವುದಿಲ್ಲ. ನಾಲ್ಕು ನಿಗಮಗಳಲ್ಲಿ ಬಸ್ಗಳ ಸಂಚಾರಕ್ಕೆ ವ್ಯತ್ಯಯವಾಗುವುದಿಲ್ಲ.</p>.<p><strong>- ಆರ್. ಚಂದ್ರಶೇಖರ್, ಸಾರಿಗೆ ನೌಕರರ ಕೂಟದ ಅಧ್ಯಕ್ಷ</strong></p>.<p><strong>***</strong></p>.<p>ಬಿಎಂಟಿಸಿ ಬಸ್ಗಳ ಸಂಚಾರದಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ. ಬಸ್ಗಳ ಸೇವೆ ಎಂದಿನಂತೆ ಇರಲಿದೆ.</p>.<p><strong>- ವಿ. ಅನ್ಬುಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>