ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂದು ನಾವು ಬಲವಾಗಿ ಪ್ರತಿಪಾದಿಸುತ್ತಿದ್ದೇವೆ. ಇಲ್ಲಿನ ನೆಲ, ಜಲ ಮತ್ತು ಭಾಷೆಯು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ನಾವೂ ಕನ್ನಡಿಗರಾಗಿದ್ದೇವೆ. ಕೆಲ ಕನ್ನಡ ಪರ ಹೋರಾಟಗಾರರು, ಸಂಘಟನೆಗಳು ಮಾಡುತ್ತಿರುವ ಆರೋಪವು ಭಾಷಾ ಸಾಮರಸ್ಯಕ್ಕೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.