ಈ ಬಗ್ಗೆ ಅವರು ಕಸಾಪ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಹಾಸೀಂಪೀರ ವಾಲೀಕಾರ ಅವರಿಗೆ ಪತ್ರ ಬರೆದಿದ್ದಾರೆ.‘ಮರಾಠಿ ನೃತ್ಯ ಆಯೋಜನೆ ಪರಿಷತ್ತಿಗೆ ಮುಜುಗರ ಉಂಟು ಮಾಡಿದೆ. ಹೀಗಾಗಿ, ತಕ್ಷಣವೇ ಕನ್ನಡಿಗರಲ್ಲಿ ಕ್ಷಮೆ ಯಾಚಿಸಬೇಕು.ಮರಾಠಿ ಭಾಷಿಕರು ಬೆಳಗಾವಿಯ ಗಡಿಯಲ್ಲಿ ಇನ್ನಿಲ್ಲದ ದಾಂಧಲೆ ಸೃಷ್ಟಿಸುತ್ತಿದ್ದಾರೆ. ಸದಾ ಕನ್ನಡಿಗರನ್ನು ಕೆಣಕುತ್ತ ಶಾಂತಿ ಮತ್ತು ಶಿಸ್ತನ್ನು ಉಲ್ಲಂಘಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ವೇದಿಕೆ ಪವಿತ್ರದ್ದು. ಅದನ್ನು ಯಾವುದೇ ಕಾರಣಕ್ಕೂ ಮಲಿನಗೊಳಿಸಬಾರದು. ಇಂತಹ ಕೃತ್ಯಗಳು ಮರುಕಳಿಸಬಾರದು’ ಎಂದು ಎಚ್ಚರಿಸಿದ್ದಾರೆ.