<p><strong>ಚಿತ್ರದುರ್ಗ:</strong> ಮೊಳಕಾಲ್ಮುರು ತಾಲ್ಲೂಕಿನ ವಡೇರಹಳ್ಳಿಯಲ್ಲಿ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಗಾಂಜಾವನ್ನು ಪೊಲೀಸರು ಪತ್ತೆ ಮಾಡಿದ್ದು, ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ನೇತೃತ್ವದಲ್ಲಿ ನಡೆದ ಭಾರಿ ದಾಳಿ ಇದಾಗಿದೆ. ಖಚಿತ ಮಾಹಿತಿಯ ಮೇರೆಗೆ ನಡೆದ ಈ ದಾಳಿಯಲ್ಲಿ ಸುಮಾರು ಒಂದು ಕೋಟಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಲಾಗಿದೆ.</p>.<p>ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ರುದ್ರೇಶ್, ಕೂಡ್ಲಗಿ ತಾಲ್ಲೂಕಿನ ಸುಮಂತ್, ಮೊಳಕಾಲ್ಮುರು ತಾಲ್ಲೂಕಿನ ರಾಂಪುರದ ಮಂಜುನಾಥ್ ಹಾಗೂ ಜಂಬುನಾಥ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ರಾಂಪುರದ ಮಂಜುನಾಥ್ ಎಂಬವರಿಗೆ ಸೇರಿದ ಜಮೀನನ್ನು ರುದ್ರೇಶ್ ಎಂಬಾತ ಗುತ್ತಿಗೆ ಪಡೆದಿದ್ದ. ಐದು ಎಕರೆ ಭೂಮಿಗೆ ವರ್ಷಕ್ಕೆ ಒಂದು ಲಕ್ಷ ನೀಡುತ್ತಿದ್ದ. ಐದು ಪೈಕಿ ನಾಲ್ಕು ಎಕರೆ ಪದೇಶದಲ್ಲಿ ಗಾಂಜಾ ಬೆಳೆಯಲಾಗಿತ್ತು ಎಂದು ಮೂಲಗಳು ಮಾಹಿತಿ ನೀಡಿವೆ. ಗಾಂಜಾ ಎಲ್ಲಿಗೆ ಪೂರೈಕೆ ಆಗುತ್ತಿತ್ತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಮೊಳಕಾಲ್ಮುರು ತಾಲ್ಲೂಕಿನ ವಡೇರಹಳ್ಳಿಯಲ್ಲಿ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಗಾಂಜಾವನ್ನು ಪೊಲೀಸರು ಪತ್ತೆ ಮಾಡಿದ್ದು, ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ನೇತೃತ್ವದಲ್ಲಿ ನಡೆದ ಭಾರಿ ದಾಳಿ ಇದಾಗಿದೆ. ಖಚಿತ ಮಾಹಿತಿಯ ಮೇರೆಗೆ ನಡೆದ ಈ ದಾಳಿಯಲ್ಲಿ ಸುಮಾರು ಒಂದು ಕೋಟಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಲಾಗಿದೆ.</p>.<p>ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ರುದ್ರೇಶ್, ಕೂಡ್ಲಗಿ ತಾಲ್ಲೂಕಿನ ಸುಮಂತ್, ಮೊಳಕಾಲ್ಮುರು ತಾಲ್ಲೂಕಿನ ರಾಂಪುರದ ಮಂಜುನಾಥ್ ಹಾಗೂ ಜಂಬುನಾಥ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ರಾಂಪುರದ ಮಂಜುನಾಥ್ ಎಂಬವರಿಗೆ ಸೇರಿದ ಜಮೀನನ್ನು ರುದ್ರೇಶ್ ಎಂಬಾತ ಗುತ್ತಿಗೆ ಪಡೆದಿದ್ದ. ಐದು ಎಕರೆ ಭೂಮಿಗೆ ವರ್ಷಕ್ಕೆ ಒಂದು ಲಕ್ಷ ನೀಡುತ್ತಿದ್ದ. ಐದು ಪೈಕಿ ನಾಲ್ಕು ಎಕರೆ ಪದೇಶದಲ್ಲಿ ಗಾಂಜಾ ಬೆಳೆಯಲಾಗಿತ್ತು ಎಂದು ಮೂಲಗಳು ಮಾಹಿತಿ ನೀಡಿವೆ. ಗಾಂಜಾ ಎಲ್ಲಿಗೆ ಪೂರೈಕೆ ಆಗುತ್ತಿತ್ತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>