ಮಸ್ಕಿ: ‘ನೀರಾವರಿ ಯೋಜನೆ ಮಾಡಿಕೊಡುವುದೂಸೇರಿದಂತೆ ಮಸ್ಕಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
ಮಸ್ಕಿಯಲ್ಲಿ ಶನಿವಾರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಮಸ್ಕಿ ಕ್ಷೇತ್ರ ವ್ಯಾಪ್ತಿಯಲ್ಲಿನ 6 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೂ ನಾನು ಮತ್ತು ಸಚಿವರಾದ ಗೋವಿಂದ ಕಾರಜೋಳ,ಶ್ರೀರಾಮುಲು ಭೇಟಿ ನೀಡುತ್ತೇವೆ. ಎಲ್ಲರನ್ನೂ ಭೇಟಿಯಾಗಿ, ಅಹವಾಲು ಆಲಿಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇವೆ’ ಎಂದರು.