ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ ಡಿಸಿಎಫ್ಗೆ ಹಲವು ಪ್ರಶ್ನೆಗಳನ್ನು ಕೇಳಿದ ಪೀಠ, ಈ ಪ್ರಕರಣ ನಿರ್ವಹಿಸಿದ ರೀತಿಗೆ ಅತೃಪ್ತಿ ವ್ಯಕ್ತಪಡಿಸಿತು. ‘ಕ್ರಿಮಿನಲ್ ಕ್ರಮವನ್ನು ಹೇಗೆ ಅನುಸರಿಸಬೇಕು ಎಂಬುದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿದಂತೆ ಕಾಣಿಸುತ್ತಿಲ್ಲ. ಹೀಗಾಗಿ, ಡಿಸಿಎಫ್ ಅನುಸರಿಸಿರುವ ಪ್ರಕ್ರಿಯೆಗಳ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಅರಣ್ಯ ಇಲಾಖೆ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗುತ್ತಿದೆ’ ಎಂದು ಪೀಠ ಹೇಳಿತು.