ಬೇಲೂರು ತಾಲ್ಲೂಕಿನ ಚೌಡನಹಳ್ಳಿ ರಸ್ತೆ ಬದಿಯಲ್ಲಿ ಬಿಸಾಡಿದ್ದ ಚೀಲದಲ್ಲಿ 38 ಮೃತಪಟ್ಟ ಮಂಗಗಳು, ಸಾವು–ಬದುಕಿನ ನಡುವೆ ಸೆಣೆಸುತ್ತಿದ್ದ 15 ಮಂಗಗಳು ದೊರೆತಿದ್ದವು. ಈ ಪ್ರಕರಣದ ಸಂಬಂಧ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆ ನಡೆಸುತ್ತಿದೆ.