ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ ನಗರದಲ್ಲಿ ಶನಿವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ 2020ನೇ ಸಾಲಿನ ‘ಮಾಸ್ತಿ ಪ್ರಶಸ್ತಿ’ಯನ್ನು ಲೇಖಕರಾದ ಸಂಧ್ಯಾ ಎಸ್. ಪೈ, ಎಸ್.ಆರ್. ವಿಜಯಶಂಕರ, ಸುಬ್ರಾಯ ಚೊಕ್ಕಾಡಿ, ಕೇಶವರೆಡ್ಡಿ ಹಂದ್ರಾಳ, ಸ. ರಘುನಾಥ ಅವರಿಗೆ ಪ್ರದಾನ ಮಾಡಿದರು. ಪ್ರಶಸ್ತಿ ಪುರಸ್ಕೃತರಲ್ಲಿ ಪುರುಷೋತ್ತಮ ಬಿಳಿಮಲೆ ಗೈರಾಗಿದ್ದರು. ಪ್ರಶಸ್ತಿಯು ತಲಾ ₹ 25 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.