ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವೇಕ ರೈ, ಕಾಯ್ಕಿಣಿ ಸೇರಿ ಏಳು ಜನರಿಗೆ ‘ಮಾಸ್ತಿ ಪ್ರಶಸ್ತಿ’

Last Updated 19 ಅಕ್ಟೋಬರ್ 2021, 15:08 IST
ಅಕ್ಷರ ಗಾತ್ರ

ಬೆಂಗಳೂರು: ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್‌ ವತಿಯಿಂದ ನೀಡಲಾಗುವ ಈ ಸಾಲಿನ ‘ಮಾಸ್ತಿ ಪ್ರಶಸ್ತಿ’ ಪ್ರಕಟಗೊಂಡಿದ್ದು, ವಿದ್ವಾಂಸ ಬಿ.ಎ. ವಿವೇಕ ರೈ, ಕವಿ ಜಯಂತ ಕಾಯ್ಕಿಣಿ ಸೇರಿದಂತೆ ಏಳು ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿನ ಸಾಧನೆಯನ್ನು ಪರಿಗಣಿಸಿ,ಟ್ರಸ್ಟ್‌ನ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ನೇತೃತ್ವದಲ್ಲಿ ಈ ಆಯ್ಕೆ ನಡೆಸಲಾಗಿದೆ.

ಪುರಸ್ಕೃತರು:ಬಿ.ಎ. ವಿವೇಕ ರೈ (ಜಾನಪದ), ಜಯಂತ ಕಾಯ್ಕಿಣಿ (ಕಾವ್ಯ), ವಿಮರ್ಶಕಮಾಧವ ಕುಲಕರ್ಣಿ (ವಿಮರ್ಶೆ), ಕಥೆಗಾರ ಆರ್. ವಿಜಯರಾಘವನ್ (ಕಾವ್ಯ), ವಿಮರ್ಶಕಿ ಎಂ.ಎಸ್. ಆಶಾದೇವಿ (ವಿಮರ್ಶೆ), ಲೇಖಕಿ ವಸುಮತಿ ಉಡುಪ (ಸೃಜನಶೀಲ) ಮತ್ತು ಎಚ್.ಎಲ್. ಪುಷ್ಪಾ (ಕಾವ್ಯ) ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯುತಲಾ ₹ 25 ಸಾವಿರ ನಗದು, ಮಾಸ್ತಿ ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿದೆ. ಪ್ರೊ.ಎಂ.ಎಚ್. ಕೃಷ್ಣಯ್ಯ,ಜಿ.ಎನ್. ರಂಗನಾಥರಾವ್, ಬಿ.ಆರ್. ಲಕ್ಷ್ಮಣರಾವ್, ಕೃಷ್ಣಮೂರ್ತಿ ಹನೂರು, ಉಷಾ ಕೇಸರಿ ಹಾಗೂ ಡಿ.ಎಂ. ರವಿಕುಮಾರ್ ಆಯ್ಕೆ ಸಮಿತಿಯಲ್ಲಿ ಇದ್ದರು.ನ.6 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆಎಂದು ಟ್ರಸ್ಟ್‌ನ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT