ಶಿವಯೋಗ ಮಂದಿರದ ಸ್ವಾಮೀಜಿ, ಶ್ರೀಶೈಲಪೀಠದ ಸ್ವಾಮೀಜಿ, ಸಿದ್ದಗಂಗಾ ಮಠದ ಸ್ವಾಮೀಜಿ, ಉಜ್ಜಯಿನಿ ಪೀಠದ ಸ್ವಾಮೀಜಿ ನೇತೃತ್ವ ವಹಿಸಲಿದ್ದು, 500ಕ್ಕೂ ಹೆಚ್ಚು ಮಠಾ ಧೀಶರು ಭಾಗವಹಿಸಲಿದ್ದಾರೆ. ವಿಜಯನಗರದ ಬಸವೇಶ್ವರ ಸುಜ್ಞಾನ ಮಂದಿರದಲ್ಲಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿಯವರ ಆಪ್ತರೂ ಆದ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.