ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಠ: ಸರ್ಕಾರದ ಮಧ್ಯಪ್ರವೇಶಕ್ಕೆ ಸಹಮತ

ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷ ಅಣಬೇರು ರಾಜಣ್ಣ ಹೇಳಿಕೆ
Last Updated 24 ನವೆಂಬರ್ 2022, 18:20 IST
ಅಕ್ಷರ ಗಾತ್ರ

ಚಿತ್ರದುರ್ಗ: ಮಠಗಳ ಆಡಳಿತವ್ಯವಸ್ಥೆಯಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾದ ಸಹಮತ ಇದೆ ಎಂದು ಮಹಾಸಭಾದ ಉಪಾಧ್ಯಕ್ಷ ಅಣಬೇರು ರಾಜಣ್ಣ ತಿಳಿಸಿ
ದರು.

‘ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರ ಮುಂದಾಗಿರುವ ಕುರಿತು ಮಹಾಸಭಾದ ನಿಲುವೇನು’ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಹೀಗೆ ಪ್ರತಿಕ್ರಿಯಿಸಿದರು.

‘ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡುವ ಮುನ್ನ ಸರ್ಕಾರದ ಅನುಮತಿ ಪಡೆಯಬೇಕು ಎಂಬ ನಿಯಮ ಪಾಲನೆಯಾಗುತ್ತಿಲ್ಲ. ಬಹುತೇಕ ಮಠಾಧೀಶರು ಏಕ ಸದಸ್ಯ ಟ್ರಸ್ಟ್‌ ರಚಿಸಿಕೊಂಡು ತಮ್ಮ ಬಳಿ ಅಧಿಕಾರ ಇಟ್ಟುಕೊಂಡಿದ್ದಾರೆ. ಮಠದ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಯುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.

‘ಶಿಕ್ಷಣ ಹಾಗೂ ಅನ್ನದಾಸೋಹಕ್ಕೆ ಆದ್ಯತೆ ನೀಡಿದ್ದ ಮಠಗಳ ಬಗ್ಗೆ ಸಮಾಜದಲ್ಲಿ ಅನ್ಯ ಭಾವನೆ ಮೂಡುತ್ತಿದೆ. ಮಠದ ಆಸ್ತಿಯನ್ನುಅನೇಕ ಪೀಠಾಧ್ಯಕ್ಷರು ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಠ ಭಕ್ತರ ಸ್ವತ್ತೇ ಹೊರತು ಪೀಠಾಧ್ಯಕ್ಷರದ್ದಲ್ಲ. ಮಠದ ವ್ಯವಸ್ಥೆ ಹಾಳಾಗಲು ಮಹಾಸಭಾ ಬಿಡುವುದಿಲ್ಲ. ಡಿ.23ರಿಂದ ಮೂರು ದಿನ ದಾವಣಗೆರೆಯಲ್ಲಿ ನಡೆಯುವ ಮಹಾಸಭಾದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT