ಕೇಂದ್ರಕ್ಕೆ ಪತ್ರ: ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಪ್ರಶ್ನೆಗೆ ಉತ್ತರಿಸಿದ ಮೀನುಗಾರಿಕಾ ಸಚಿವರು, ‘ಮೀನುಗಾರಿಕಾ ದೋಣಿಗಳಿಗೆ ರಿಯಾಯ್ತಿ ದರದಲ್ಲಿ ಸೀಮೆಎಣ್ಣೆ ಮತ್ತು ಡೀಸೆಲ್ ವಿತರಣೆಗೆ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ’ ಎಂದರು.