‘ಪತ್ರಿಕೆಯಲ್ಲಿ ಜಾಹೀರಾತು ನೀಡುವ ಮೂಲಕ ಕಾರಜೋಳ ಅವರು ಮೂರನೇ ದರ್ಜೆಯ ಕೆಲಸ ಮಾಡಿದ್ದಾರೆ. ಜಾಹೀರಾತು ಪ್ರಾಯೋಜಿತ ಎಂದೂ ಹಾಕಿದ್ದಾರೆ. ಅನಾಮಧೇಯರು ಹಾಕಿದ್ದು ಅದು. ಯಾರ ಸತ್ಯ ದರ್ಶನ ಇದು. ಇದು ಯಾರ ವಿವೇಕ. ಬಿಜೆಪಿನೂ ಕೊಟ್ಟಿಲ್ಲ, ಸರ್ಕಾರ ಕೊಟ್ಟಿಲ್ಲ, ಸಂಘ ಸಂಸ್ಥೆಗಳೂ ಕೊಟ್ಟಿಲ್ಲ. ಹಾಗಿದ್ದರೆ ಕೊಟ್ಟವರು ಯಾರು? ಚಿಲ್ಲರೆಯಾಗಿ ವರ್ತನೆ ಮಾಡುತ್ತಿರುವುದು ಯಾರು. ಇದಕ್ಕೆಲ್ಲ ಕಾರಜೋಳ ಕಾರಣ’ ಎಂದೂ ಟೀಕಿಸಿದರು.