‘ವೈದ್ಯಕೀಯ ಪದವಿ ವ್ಯಾಸಂಗ ಮುಗಿಸಿದವರು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ಬಗ್ಗೆ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದೊಂದಿಗೆ ಷರತ್ತುಬದ್ಧ ಒಪ್ಪಂದ ಮಾಡಿಕೊಳ್ಳಲಾಗುತ್ತಿತ್ತು. 2015ರ ಕಡ್ಡಾಯ ಸೇವಾ ತರಬೇತಿ ತಿದ್ದುಪಡಿ ಕಾಯ್ದೆಯನ್ವಯ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಸೇವೆಸಲ್ಲಿಸಬೇಕು ಎಂದಿದೆ. ಆದರೆ, ಈ ಬಗ್ಗೆ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸುತ್ತಿಲ್ಲ’ ಎಂದು ಎಂಬಿಬಿಎಸ್ ಪದವೀಧರರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.