<p><strong>ಚಿತ್ರದುರ್ಗ</strong>: ಬಿದಿರು ಅಭಿವೃದ್ಧಿ ಹಾಗೂ ಬಿದಿರು ಉತ್ಪನ್ನಗಳ ಸಂರಕ್ಷಣೆಗಾಗಿ ಮೇದಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು. ಕೇತೇಶ್ವರ ಜಯಂತಿ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.</p>.<p>ಇಲ್ಲಿನ ಮೇದಾರ ಗುರುಪೀಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮೇದಾರ ಬುಡಕಟ್ಟು ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೇದಾರ ಸಮುದಾಯದ ಕುಲಕಸುಬಿಗೆ ಬೆಂಬಲ ನೀಡುವ ಉದ್ದೇಶದಿಂದ ನಿಗಮ ಸ್ಥಾಪಿಸುವ ಅಗತ್ಯವಿದೆ. ಬಿದಿರು ಬೆಳೆಯಲು ಭೂಮಿ ಮೀಸಲು ಇಡಲಾಗುವುದು. ಅರಣ್ಯ ಇಲಾಖೆ ಪೂರೈಕೆ ಮಾಡುವ ಬಿದಿರಿಗೆ ಯೋಗ್ಯ ದರ ನಿಗದಿಪಡಿಸುತ್ತೇವೆ’ ಎಂದು ಆಶ್ವಾಸನೆ ನೀಡಿದರು.</p>.<p>‘ಬಿದಿರು ಉತ್ಪನ್ನಗಳಿಗೆ ಜಿಎಸ್ಟಿ ವಿನಾಯಿತಿ ನೀಡುವ ವಿಚಾರವನ್ನು ಚರ್ಚಿಸಿ ಸಮುದಾಯಕ್ಕೆ ಅನುಕೂಲವಾಗುವ ತೀರ್ಮಾನ ಕೈಗೊಳ್ಳುತ್ತೇವೆ. ಬಿದಿರು ಉತ್ಪನ್ನಗಳ ತಯಾರಿಕೆಯಲ್ಲಿ ಹೊಸ ತಂತ್ರಜ್ಞಾನ, ಕೌಶಲ ತರಲು ಪ್ರಯತ್ನಿಸುತ್ತೇವೆ. ಈ ವಸ್ತುಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಇದ್ದು, ಅಮೇಜಾನ್, ಫ್ಲಿಪ್ಕಾರ್ಟ್ಗೆ ಜೋಡಿಸುವ ಕಾರ್ಯ ಆಗಬೇಕಿದೆ’ ಎಂದರು.</p>.<p class="Subhead"><strong>ಸಂಪುಟ ಶೀಘ್ರ ವಿಸ್ತರಣೆ: ಸಿಎಂ</strong></p>.<p>ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರ ನಾಯಕರೊಂದಿಗೆ ವಿಸ್ತೃತವಾಗಿ ಚರ್ಚಿಸಲಾಗಿದೆ. ಸಂಪುಟ ಶೀಘ್ರ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>‘ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ವರಿಷ್ಠರ ಗಮನಕ್ಕೆ ತರಲಾಗಿದೆ. ಮತ್ತೊಂದು ಸುತ್ತಿನ ಸಭೆ ನಡೆದ ಬಳಿಕ ತೀರ್ಮಾನ ಹೊರಬೀಳಲಿದೆ. ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕಲ್ಪಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ’ ಎಂದು ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p class="Subhead"><strong>‘ನಾವು ಗೌಂಡಿಗಳೇ, ಲೂಟಿಕೋರರಲ್ಲ’</strong></p>.<p>ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ನಾವೆಲ್ಲರೂ ದೇಶವನ್ನು ಕಟ್ಟುವ ಗೌಂಡಿಗಳೇ ವಿನಾ ರಾಹುಲ್ ಹಾಗೂ ಸೋನಿಯಾಗಾಂಧಿ ಅವರಂತೆ ಲೂಟಿಕೋರರಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು.</p>.<p>ರಾಮಮಂದಿರ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಷಿ, ‘ರಾಮಮಂದಿರ ಉದ್ಘಾಟನೆ ಮಾಡುವುದಕ್ಕೆ ಏಕಿಷ್ಟು ಹೊಟ್ಟೆಕಿಚ್ಚು? ಹಿಂದೂಗಳ ಬಗ್ಗೆ ನಿಮಗೆ ಏಕೆ ಇಷ್ಟು ದ್ವೇಷ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದರು.</p>.<p>‘ಸ್ಯಾಂಟ್ರೊ ರವಿ ಯಾರೂ ಎಂಬುದು ಗೊತ್ತಿಲ್ಲ. ಡಿ.ಕೆ.ಸುರೇಶ್ ತಮ್ಮ ಪೂರ್ವಾಶ್ರಮವನ್ನು ನೆನಪಿಸಿಕೊಳ್ಳಬೇಕು. ಡಿ.ಕೆ.ಶಿವಕುಮಾರ್ ಯಾರಿಗೆ ಟೀ ಕೊಡುತ್ತಿದ್ದರು ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಬೇಕು’ ಎಂದು ತಿರುಗೇಟು ನೀಡಿದರು.</p>.<p>ಮೇದಾರ ಗುರುಪೀಠದ ಇಮ್ಮಡಿ ಬಸವ ಕೇತೇಶ್ವರ ಸ್ವಾಮೀಜಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಸಕ ಜಗದೀಶ ಶೆಟ್ಟರ್, ಮೇದಾರ ಕೇತೇಶ್ವರ ಟ್ರಸ್ಟ್ ಅಧ್ಯಕ್ಷ ಸಿ.ಪಿ.ಪಾಟೀಲ, ಮೇದಾರ ಗಿರಿ ಜನಾಂಗ ಕಲ್ಯಾಣ ಸೇವಾ ಸಂಘದ ಅಧ್ಯಕ್ಷ ವೈ.ಕೆ.ಹಳೆಪೇಟೆ ಇದ್ದರು.</p>.<p>***</p>.<p>ಬೇಡಿಕೆ ಈಡೇರಿಸಿಕೊಳ್ಳಲು ಕೆಲ ಸಮುದಾಯ ಬೆದರಿಕೆ ತಂತ್ರ ಅನುಸರಿಸುತ್ತಿವೆ. ಆಡಳಿತ ವ್ಯವಸ್ಥೆಯನ್ನು ಮಠಾಧೀಶರು ಬೇಡಬೇಕೆ ವಿನಾ ದಬ್ಬಾಳಿಕೆ ಮಾಡುವುದಲ್ಲ.<br /><strong>ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠ</strong></p>.<p>***</p>.<p>ಮುಖ್ಯಮಂತ್ರಿಯನ್ನು ನಾಯಿಗೆ ಹೋಲಿಸಿದ್ದು ಸರಿಯಲ್ಲ. ಸಿದ್ದರಾಮಯ್ಯ ಕೂಡಲೇ ರಾಜ್ಯದ ಕ್ಷಮೆ ಯಾಚಿಸಬೇಕು. ರಾಹುಲ್ ಬಳಿ ಕೈಕಟ್ಟಿ ನಿಲ್ಲುವ ನಿಮಗೆ ಹೀಗೆ ಮಾತನಾಡಲು ನಾಚಿಕೆ ಆಗುವುದಿಲ್ಲವೇ.<br /><strong>ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಬಿದಿರು ಅಭಿವೃದ್ಧಿ ಹಾಗೂ ಬಿದಿರು ಉತ್ಪನ್ನಗಳ ಸಂರಕ್ಷಣೆಗಾಗಿ ಮೇದಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು. ಕೇತೇಶ್ವರ ಜಯಂತಿ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.</p>.<p>ಇಲ್ಲಿನ ಮೇದಾರ ಗುರುಪೀಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮೇದಾರ ಬುಡಕಟ್ಟು ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೇದಾರ ಸಮುದಾಯದ ಕುಲಕಸುಬಿಗೆ ಬೆಂಬಲ ನೀಡುವ ಉದ್ದೇಶದಿಂದ ನಿಗಮ ಸ್ಥಾಪಿಸುವ ಅಗತ್ಯವಿದೆ. ಬಿದಿರು ಬೆಳೆಯಲು ಭೂಮಿ ಮೀಸಲು ಇಡಲಾಗುವುದು. ಅರಣ್ಯ ಇಲಾಖೆ ಪೂರೈಕೆ ಮಾಡುವ ಬಿದಿರಿಗೆ ಯೋಗ್ಯ ದರ ನಿಗದಿಪಡಿಸುತ್ತೇವೆ’ ಎಂದು ಆಶ್ವಾಸನೆ ನೀಡಿದರು.</p>.<p>‘ಬಿದಿರು ಉತ್ಪನ್ನಗಳಿಗೆ ಜಿಎಸ್ಟಿ ವಿನಾಯಿತಿ ನೀಡುವ ವಿಚಾರವನ್ನು ಚರ್ಚಿಸಿ ಸಮುದಾಯಕ್ಕೆ ಅನುಕೂಲವಾಗುವ ತೀರ್ಮಾನ ಕೈಗೊಳ್ಳುತ್ತೇವೆ. ಬಿದಿರು ಉತ್ಪನ್ನಗಳ ತಯಾರಿಕೆಯಲ್ಲಿ ಹೊಸ ತಂತ್ರಜ್ಞಾನ, ಕೌಶಲ ತರಲು ಪ್ರಯತ್ನಿಸುತ್ತೇವೆ. ಈ ವಸ್ತುಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಇದ್ದು, ಅಮೇಜಾನ್, ಫ್ಲಿಪ್ಕಾರ್ಟ್ಗೆ ಜೋಡಿಸುವ ಕಾರ್ಯ ಆಗಬೇಕಿದೆ’ ಎಂದರು.</p>.<p class="Subhead"><strong>ಸಂಪುಟ ಶೀಘ್ರ ವಿಸ್ತರಣೆ: ಸಿಎಂ</strong></p>.<p>ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರ ನಾಯಕರೊಂದಿಗೆ ವಿಸ್ತೃತವಾಗಿ ಚರ್ಚಿಸಲಾಗಿದೆ. ಸಂಪುಟ ಶೀಘ್ರ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>‘ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ವರಿಷ್ಠರ ಗಮನಕ್ಕೆ ತರಲಾಗಿದೆ. ಮತ್ತೊಂದು ಸುತ್ತಿನ ಸಭೆ ನಡೆದ ಬಳಿಕ ತೀರ್ಮಾನ ಹೊರಬೀಳಲಿದೆ. ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕಲ್ಪಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ’ ಎಂದು ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p class="Subhead"><strong>‘ನಾವು ಗೌಂಡಿಗಳೇ, ಲೂಟಿಕೋರರಲ್ಲ’</strong></p>.<p>ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ನಾವೆಲ್ಲರೂ ದೇಶವನ್ನು ಕಟ್ಟುವ ಗೌಂಡಿಗಳೇ ವಿನಾ ರಾಹುಲ್ ಹಾಗೂ ಸೋನಿಯಾಗಾಂಧಿ ಅವರಂತೆ ಲೂಟಿಕೋರರಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು.</p>.<p>ರಾಮಮಂದಿರ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಷಿ, ‘ರಾಮಮಂದಿರ ಉದ್ಘಾಟನೆ ಮಾಡುವುದಕ್ಕೆ ಏಕಿಷ್ಟು ಹೊಟ್ಟೆಕಿಚ್ಚು? ಹಿಂದೂಗಳ ಬಗ್ಗೆ ನಿಮಗೆ ಏಕೆ ಇಷ್ಟು ದ್ವೇಷ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದರು.</p>.<p>‘ಸ್ಯಾಂಟ್ರೊ ರವಿ ಯಾರೂ ಎಂಬುದು ಗೊತ್ತಿಲ್ಲ. ಡಿ.ಕೆ.ಸುರೇಶ್ ತಮ್ಮ ಪೂರ್ವಾಶ್ರಮವನ್ನು ನೆನಪಿಸಿಕೊಳ್ಳಬೇಕು. ಡಿ.ಕೆ.ಶಿವಕುಮಾರ್ ಯಾರಿಗೆ ಟೀ ಕೊಡುತ್ತಿದ್ದರು ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಬೇಕು’ ಎಂದು ತಿರುಗೇಟು ನೀಡಿದರು.</p>.<p>ಮೇದಾರ ಗುರುಪೀಠದ ಇಮ್ಮಡಿ ಬಸವ ಕೇತೇಶ್ವರ ಸ್ವಾಮೀಜಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಸಕ ಜಗದೀಶ ಶೆಟ್ಟರ್, ಮೇದಾರ ಕೇತೇಶ್ವರ ಟ್ರಸ್ಟ್ ಅಧ್ಯಕ್ಷ ಸಿ.ಪಿ.ಪಾಟೀಲ, ಮೇದಾರ ಗಿರಿ ಜನಾಂಗ ಕಲ್ಯಾಣ ಸೇವಾ ಸಂಘದ ಅಧ್ಯಕ್ಷ ವೈ.ಕೆ.ಹಳೆಪೇಟೆ ಇದ್ದರು.</p>.<p>***</p>.<p>ಬೇಡಿಕೆ ಈಡೇರಿಸಿಕೊಳ್ಳಲು ಕೆಲ ಸಮುದಾಯ ಬೆದರಿಕೆ ತಂತ್ರ ಅನುಸರಿಸುತ್ತಿವೆ. ಆಡಳಿತ ವ್ಯವಸ್ಥೆಯನ್ನು ಮಠಾಧೀಶರು ಬೇಡಬೇಕೆ ವಿನಾ ದಬ್ಬಾಳಿಕೆ ಮಾಡುವುದಲ್ಲ.<br /><strong>ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠ</strong></p>.<p>***</p>.<p>ಮುಖ್ಯಮಂತ್ರಿಯನ್ನು ನಾಯಿಗೆ ಹೋಲಿಸಿದ್ದು ಸರಿಯಲ್ಲ. ಸಿದ್ದರಾಮಯ್ಯ ಕೂಡಲೇ ರಾಜ್ಯದ ಕ್ಷಮೆ ಯಾಚಿಸಬೇಕು. ರಾಹುಲ್ ಬಳಿ ಕೈಕಟ್ಟಿ ನಿಲ್ಲುವ ನಿಮಗೆ ಹೀಗೆ ಮಾತನಾಡಲು ನಾಚಿಕೆ ಆಗುವುದಿಲ್ಲವೇ.<br /><strong>ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>