ಬೆಳಗಾವಿ (ಸುವರ್ಣ ವಿಧಾನಸೌಧ): ಸುದ್ದಿ ವಾಹಿನಿಗಳ ಕ್ಯಾಮೆರಾಗಳನ್ನು ವಿಧಾನಸಭೆಯ ಆವರಣಕ್ಕೆ ತರದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ ನಿರ್ಬಂಧ ವಿಧಿಸಿದ್ದಾರೆ.
ವಿಧಾನಸಭೆಯ ಸಭಾಂಗಣಕ್ಕೆ ಪ್ರವೇಶ ನಿರ್ಬಂಧಿಸಿ ಈ ಹಿಂದೆಯೇ ಆದೇಶ ಹೊರಡಿಸಲಾಗಿತ್ತು. ಹೊರಗಡೆ ಕ್ಯಾಮೆರಾಗಳನ್ನು ಬಳಸಲು ಅವಕಾಶವಿತ್ತು.
ಆದರೆ, ಕ್ಯಾಮೆರಾಗಳನ್ನು ವಿಧಾನಸಭೆಯ ಹೊರಾಂಗಣಕ್ಕೂ ತರದಂತೆ ಬುಧವಾರದಿಂದ ನಿರ್ಬಂಧ ವಿಧಿಸಲಾಗಿದೆ. ಇದನ್ನು ಪ್ರತಿಭಟಿಸಿ ದೃಶ್ಯ ಮಾಧ್ಯಮಗಳ ಪ್ರತಿನಿಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ವಿಧಾನ ಪರಿಷತ್ನಲ್ಲಿ ಹಿಂದಿನಂತಯೇ ಕ್ಯಾಮೆರಾಗಳಿಗೆ ಅವಕಾಶ ನೀಡಲಾಗಿದೆ.