‘ಕೆಲವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಅವರನ್ನು ಸೂಪರ್ ಸಿ.ಎಂ ಎಂದು ಕರೆದರೂ, ನಾನು ಏನೂ ಹೇಳುತ್ತಿಲ್ಲ. ಬಿಜೆಪಿಯಲ್ಲಿ ವಿಜಯೇಂದ್ರ ಅವರು ಮತ್ತಷ್ಟು ಸಕ್ರಿಯರಾಗಿರುವುದು, ಕೆಲ ಬಿಜೆಪಿ ನಾಯಕರಿಗೆ ಸಹಿಸಲಾಗುತ್ತಿಲ್ಲ ಎಂದೆನಿಸುತ್ತಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮುಂದುವರಿಯಲು ಬಿಜೆಪಿ ನಾಯಕರು ಬಿಟ್ಟರೆ, ಅವರದೇ ನಿವೃತ್ತಿ ವರ್ಷದ ನಿಯಮವನ್ನು ಉಲ್ಲಂಘಿಸಿದಂತಾಗುತ್ತದೆ. ಹೀಗಾದರೆ ಪಕ್ಷದೊಳಗೇ ಯಡಿಯೂರಪ್ಪ ಅವರು ಸಮಸ್ಯೆ ಎದುರಿಸಬಹುದು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.