ಈ ಕುರಿತು ಸೋಮವಾರ ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್, ಆರೋಗ್ಯ ಸೇವೆಯಲ್ಲಿ ತೊಡಗಿಕೊಂಡಿರುವ ಸಿಬ್ಬಂದಿ ಮುಷ್ಕರಗಳನ್ನು ನಡೆಸುವುದು, ಅಸಹಕಾರ ವ್ಯಕ್ತಪಡಿಸುವುದು, ವರದಿಗಳನ್ನು ನೀಡದೇ ಇರುವುದು, ಅವಿಧೇಯತೆ ತೋರಿಸುವುದು, ಮೇಲಧಿಕಾರಿಗಳ ಆದೇಶ ಪಾಲನೆ ಮಾಡದೇ ಇರುವಂತಹ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.