<p><strong>ಬೆಂಗಳೂರು</strong>: ಕೋವಿಡ್ ಮೂರನೆ ಅಲೆ ಎದುರಿಸುವುದಕ್ಕಾಗಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ 70ರಿಂದ 80 ಹಾಸಿಗೆಗಳ ಪ್ರತ್ಯೇಕ ಮಕ್ಕಳ ಚಿಕಿತ್ಸಾ ವಿಭಾಗಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.</p>.<p>ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಮಂಗಳವಾರ ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಮೂರನೆ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ. ಮಕ್ಕಳ ಚಿಕಿತ್ಸೆಗೆ ಸೌಲಭ್ಯಗಳನ್ನು ಹೆಚ್ಚಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>ಕೆಲವೆಡೆ ಈಗಾಗಲೇ ಇರುವ 20 ಹಾಸಿಗೆಗಳ ಮಕ್ಕಳ ವಿಭಾಗವನ್ನು 80 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲಾಗುವುದು. ಮಕ್ಕಳ ವಿಭಾಗಕ್ಕೆ ಅಗತ್ಯ ಸಂಖ್ಯೆಯ ತಜ್ಞ ವೈದ್ಯರು, ನರ್ಸಿಂಗ್ ಸಿಬ್ಬಂದಿಯನ್ನು ಒದಗಿಸಲಾಗುವುದು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮೂಲಕ ಅವರಿಗೆ ತರಬೇತಿ ನೀಡಲಾಗುವುದು ಎಂದರು.</p>.<p class="Subhead"><strong>ಪ್ರಯೋಗಾಲಯ ಆರಂಭ: </strong>ಎರಡನೆ ಅಲೆಯಲ್ಲಿ ಕಂಡುಬಂದಿರುವ ರೂಪಾಂತರಿ ವೈರಾಣುವಿನ ವಂಶವಾಹಿ ಕುರಿತು ಅಧ್ಯಯನ ನಡೆಸಲು ರಾಜ್ಯದ ಐದು ವೈದ್ಯಕೀಯ ಕಾಲೇಜುಗಳು, ಮಂಗಳೂರಿನ ವೆನ್ಲಾಕ್ ಮತ್ತು ವಿಜಯಪುರದ ಸರ್ಕಾರಿ ಆಸ್ಪತ್ರೆ ಸೇರಿದಂತೆ ಏಳು ಜೆನೋಮಿಕ್ ಪ್ರಯೋಗಾಲಯಗಳನ್ನು ಆರಂಭಿಸಲಾಗುವುದು ಎಂದು ಸಚಿವರು ಹೇಳಿದರು.</p>.<p class="Subhead"><strong>ಔಷಧಿ ಕೊರತೆ ಇದೆ:</strong> ಕಪ್ಪು ಶಿಲೀಂಧ್ರ ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳಸುವ ಅ್ಯಂಫೋಟೆರಿಸಿನ್ ಚುಚ್ಚುಮದ್ದಿನ ಕೊರತೆ ಇದೆ. ಕೇಂದ್ರ ಸರ್ಕಾರ 1,300 ವಯಲ್ಸ್ ಹಂಚಿಕೆ ಮಾಡಿದ್ದು, ರಾಜ್ಯದಲ್ಲಿರುವ ರೋಗಿಗಳ ಸಂಖ್ಯೆಗೆ ಹೋಲಿಸಿದರೆ ಸಾಕಾಗುವುದಿಲ್ಲ. ಕೇಂದ್ರ ಸಚಿವರನ್ನು ಸಂಪರ್ಕಿಸಿ ಹೆಚ್ಚಿನ ಪಡೆಯಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.</p>.<p>ಕಪ್ಪು ಶಿಲೀಂಧ್ರ ಕಣ್ಣಿಗೆ ತಲುಪಿದ ಬಳಿಕ ಅದು ಮೆದುಳನ್ನು ಪ್ರವೇಶಿಸದಂತೆ ತಡೆಯಲು ಕಣ್ಣನ್ನೇ ತೆಗೆಯಲಾಗುತ್ತಿದೆ. ನೇತ್ರ ತಜ್ಞರು, ದಂತ ವೈದ್ಯರು ಸೇರಿದಂತೆ ತಜ್ಞ ವೈದ್ಯರ ತಂಡ ಸೇರಿ ಈ ತೀರ್ಮಾನ ಕೈಗೊಳ್ಳುತ್ತಿದೆ. ಇದು ಔಷಧಿ ಕೊರತೆಯಿಂದ ಆದ ಸಮಸ್ಯೆ ಅಲ್ಲ ಎಂದರು.</p>.<p><strong>‘ಕವಾಸಕಿ’ ಸೋಂಕು ಪತ್ತೆ</strong></p>.<p>ಕೋವಿಡ್ನಿಂದ ಗುಣಮುಖರಾದ ಇಬ್ಬರು ಮಕ್ಕಳಲ್ಲಿ ರಕ್ತನಾಳಗಳಲ್ಲಿ ಉರಿಯೂತಕ್ಕೆ ಕಾರಣವಾಗುವ ‘ಕವಾಸಕಿ’ ಸೋಂಕು ಕಂಡುಬಂದಿದೆ. ಕೋವಿಡ್ ಅದಕ್ಕೆ ಕಾರಣವಾಗಿರಬಹುದು ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಶಂಕಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.</p>.<p>ಸೋಂಕು ಯಾವ ಕಾರಣದಿಂದ ಬಂದಿದೆ, ಮಕ್ಕಳ ಸಾಮಾಜಿಕ ಹಿನ್ನೆಲೆ, ಆಹಾರ ಕ್ರಮಗಳ ಕುರಿತು ಅಧ್ಯಯನ ನಡೆಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ಮೂರನೆ ಅಲೆ ಎದುರಿಸುವುದಕ್ಕಾಗಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ 70ರಿಂದ 80 ಹಾಸಿಗೆಗಳ ಪ್ರತ್ಯೇಕ ಮಕ್ಕಳ ಚಿಕಿತ್ಸಾ ವಿಭಾಗಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.</p>.<p>ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಮಂಗಳವಾರ ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಮೂರನೆ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ. ಮಕ್ಕಳ ಚಿಕಿತ್ಸೆಗೆ ಸೌಲಭ್ಯಗಳನ್ನು ಹೆಚ್ಚಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>ಕೆಲವೆಡೆ ಈಗಾಗಲೇ ಇರುವ 20 ಹಾಸಿಗೆಗಳ ಮಕ್ಕಳ ವಿಭಾಗವನ್ನು 80 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲಾಗುವುದು. ಮಕ್ಕಳ ವಿಭಾಗಕ್ಕೆ ಅಗತ್ಯ ಸಂಖ್ಯೆಯ ತಜ್ಞ ವೈದ್ಯರು, ನರ್ಸಿಂಗ್ ಸಿಬ್ಬಂದಿಯನ್ನು ಒದಗಿಸಲಾಗುವುದು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮೂಲಕ ಅವರಿಗೆ ತರಬೇತಿ ನೀಡಲಾಗುವುದು ಎಂದರು.</p>.<p class="Subhead"><strong>ಪ್ರಯೋಗಾಲಯ ಆರಂಭ: </strong>ಎರಡನೆ ಅಲೆಯಲ್ಲಿ ಕಂಡುಬಂದಿರುವ ರೂಪಾಂತರಿ ವೈರಾಣುವಿನ ವಂಶವಾಹಿ ಕುರಿತು ಅಧ್ಯಯನ ನಡೆಸಲು ರಾಜ್ಯದ ಐದು ವೈದ್ಯಕೀಯ ಕಾಲೇಜುಗಳು, ಮಂಗಳೂರಿನ ವೆನ್ಲಾಕ್ ಮತ್ತು ವಿಜಯಪುರದ ಸರ್ಕಾರಿ ಆಸ್ಪತ್ರೆ ಸೇರಿದಂತೆ ಏಳು ಜೆನೋಮಿಕ್ ಪ್ರಯೋಗಾಲಯಗಳನ್ನು ಆರಂಭಿಸಲಾಗುವುದು ಎಂದು ಸಚಿವರು ಹೇಳಿದರು.</p>.<p class="Subhead"><strong>ಔಷಧಿ ಕೊರತೆ ಇದೆ:</strong> ಕಪ್ಪು ಶಿಲೀಂಧ್ರ ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳಸುವ ಅ್ಯಂಫೋಟೆರಿಸಿನ್ ಚುಚ್ಚುಮದ್ದಿನ ಕೊರತೆ ಇದೆ. ಕೇಂದ್ರ ಸರ್ಕಾರ 1,300 ವಯಲ್ಸ್ ಹಂಚಿಕೆ ಮಾಡಿದ್ದು, ರಾಜ್ಯದಲ್ಲಿರುವ ರೋಗಿಗಳ ಸಂಖ್ಯೆಗೆ ಹೋಲಿಸಿದರೆ ಸಾಕಾಗುವುದಿಲ್ಲ. ಕೇಂದ್ರ ಸಚಿವರನ್ನು ಸಂಪರ್ಕಿಸಿ ಹೆಚ್ಚಿನ ಪಡೆಯಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.</p>.<p>ಕಪ್ಪು ಶಿಲೀಂಧ್ರ ಕಣ್ಣಿಗೆ ತಲುಪಿದ ಬಳಿಕ ಅದು ಮೆದುಳನ್ನು ಪ್ರವೇಶಿಸದಂತೆ ತಡೆಯಲು ಕಣ್ಣನ್ನೇ ತೆಗೆಯಲಾಗುತ್ತಿದೆ. ನೇತ್ರ ತಜ್ಞರು, ದಂತ ವೈದ್ಯರು ಸೇರಿದಂತೆ ತಜ್ಞ ವೈದ್ಯರ ತಂಡ ಸೇರಿ ಈ ತೀರ್ಮಾನ ಕೈಗೊಳ್ಳುತ್ತಿದೆ. ಇದು ಔಷಧಿ ಕೊರತೆಯಿಂದ ಆದ ಸಮಸ್ಯೆ ಅಲ್ಲ ಎಂದರು.</p>.<p><strong>‘ಕವಾಸಕಿ’ ಸೋಂಕು ಪತ್ತೆ</strong></p>.<p>ಕೋವಿಡ್ನಿಂದ ಗುಣಮುಖರಾದ ಇಬ್ಬರು ಮಕ್ಕಳಲ್ಲಿ ರಕ್ತನಾಳಗಳಲ್ಲಿ ಉರಿಯೂತಕ್ಕೆ ಕಾರಣವಾಗುವ ‘ಕವಾಸಕಿ’ ಸೋಂಕು ಕಂಡುಬಂದಿದೆ. ಕೋವಿಡ್ ಅದಕ್ಕೆ ಕಾರಣವಾಗಿರಬಹುದು ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಶಂಕಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.</p>.<p>ಸೋಂಕು ಯಾವ ಕಾರಣದಿಂದ ಬಂದಿದೆ, ಮಕ್ಕಳ ಸಾಮಾಜಿಕ ಹಿನ್ನೆಲೆ, ಆಹಾರ ಕ್ರಮಗಳ ಕುರಿತು ಅಧ್ಯಯನ ನಡೆಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>