ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ವಿಚಾರಣೆ ಮುಂದೂಡಿಕೆ

Last Updated 26 ಜುಲೈ 2022, 6:20 IST
ಅಕ್ಷರ ಗಾತ್ರ

ನವದೆಹಲಿ: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವು ಯೋಜನೆಯ ಡಿಪಿಆರ್ ಬಗ್ಗೆ ಅಭಿಪ್ರಾಯ ನೀಡಬಾರದು ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಕಳೆದ ವಾರ ವಿಚಾರಣೆ ನಡೆಸಿದ್ದ ಕೋರ್ಟ್ ಪ್ರಾಧಿಕಾರಕ್ಕೆ ನೋಟಿಸ್ ನೀಡಿತ್ತು.

ಮಂಗಳವಾರದ ವಿಚಾರಣೆ ವೇಳೆ ಪ್ರಾಧಿಕಾರದ ವಕೀಲರು, ತಮಿಳುನಾಡು ಸರ್ಕಾರದ ತಕರಾರಿಗೆ ಉತ್ತರ ನೀಡಲು ಕಾಲಾವಕಾಶ ಕೇಳಿದರು. ಬಳಿಕ‌ ನ್ಯಾಯಪೀಠವು ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT