ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿಗೆ ಹಂಚಿಕೆಯಾದ ನೀರಿನ ಪ್ರಮಾಣದಲ್ಲಿ ಯಾವುದೇ ಕಡಿತವಾಗುವುದಿಲ್ಲ. ಈ ಯೋಜನೆ ಅನುಷ್ಠಾನದಿಂದ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಉಪಯೋಗವಾಗಲಿದೆ. ಹೆಚ್ಚುವರಿ ಮಳೆ, ಪ್ರವಾಹ ಉಂಟಾದ ವರ್ಷಗಳಲ್ಲಿ ಮೇಕೆದಾಟು ಅಣೆಕಟ್ಟೆಯಲ್ಲಿ ನೀರನ್ನು ಸಂಗ್ರಹಿಸಿ, ವಿದ್ಯುತ್ ಉತ್ಪಾದನೆಗೆ ಹಾಗೂ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಕ್ಕೆ ಕುಡಿಯಲು ಬಳಸಿಕೊಳ್ಳಲಾಗುತ್ತದೆ. ಈ ಯೋಜನೆಗೆ ತಮಿಳುನಾಡು ಅನಗತ್ಯ ಖ್ಯಾತೆ ತೆಗೆಯುವುದು ಸರಿಯಲ್ಲ ಎಂದರು.