ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Live | ಮೇಕೆದಾಟು: ಕಾಂಗ್ರೆಸ್‌ನಿಂದ ‘ನೀರಿಗಾಗಿ ನಡಿಗೆ’, ಸಂಗಮ‌ದಿಂದ ಪಾದಯಾತ್ರೆ ಆರಂಭ
LIVE

ಕನಕಪುರ ತಾಲ್ಲೂಕಿನ ಕಾವೇರಿಯ ತಟ, ಸಂಗಮ ಬಳಿಯಿಂದ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಆರಂಭಿಸಲಿದೆ. ಪಾದಯಾತ್ರೆಗೆ ತಡೆಯೊಡ್ಡಲು ರಾಜ್ಯ ಸರ್ಕಾರವೂ ಪ್ರತಿತಂತ್ರ ರೂಪಿಸತೊಡಗಿದ್ದು, ‘ನೀರಿಗಾಗಿ ನಡಿಗೆ’ ಸೋಮವಾರಕ್ಕೂ ಮುಂದುವರಿಯುತ್ತದೆಯೇ ಎಂಬುದು ಸದ್ಯದ ಕುತೂಹಲವಾಗಿದೆ.ಕನಕಪುರದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ನಾಯಕರೆಲ್ಲ ಒಗ್ಗಟ್ಟಾಗಿ ಪಾದಯಾತ್ರೆಯ ರಣಕಹಳೆ ಊದಿದರು. ‘ಜೈಲಿಗೆ ಕಳುಹಿಸಿದರೂ ಸಿದ್ಧ. ಎಲ್ಲಿ ನಮ್ಮನ್ನು ಬಂಧಿಸಿ ಬಿಡುಗಡೆ ಮಾಡುತ್ತೀರೋ ಅಲ್ಲಿಂದಲೇ ಮತ್ತೆ ನಡೆಯುತ್ತೇವೆ’ ಎಂದು ಗುಡುಗಿದರು. ಇಂದು ಕಾಂಗ್ರೆಸ್‌ನ ನೂರಕ್ಕೂ ಹೆಚ್ಚು ಶಾಸಕರು, ವಿಧಾನ ಪರಿಷತ್‌ ಸದಸ್ಯರ ಜೊತೆಗೆ ಜಿಲ್ಲೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
Last Updated 9 ಜನವರಿ 2022, 5:53 IST
ಅಕ್ಷರ ಗಾತ್ರ
05:5209 Jan 2022

ಮೇಕೆದಾಟು ಪಾದಯಾತ್ರೆ ಆರಂಭ

ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಸಂಗಮದಿಂದ ಪಾದಯಾತ್ರೆ ಆರಂಭವಾಗಿದೆ.

05:4109 Jan 2022

ಅಪರಾಧಿ ಮನೋಭಾವದಿಂದ ಕಾಂಗ್ರೆಸ್‌ ಪಾದಯಾತ್ರೆ: ಸಿಎಂ ಬೊಮ್ಮಾಯಿ

ಐದು ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‌ ಪಕ್ಷ ಮೇಕೆದಾಟು ಯೋಜನೆಗಾಗಿ ಏನೂ ಮಾಡಿರಲಿಲ್ಲ. ಈಗ ಅಪರಾಧಿ ಮನೋಭಾವದಿಂದ ಪಾದಯಾತ್ರೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

05:1209 Jan 2022

ಪಾದಯಾತ್ರೆಗೆ ಚಾಲನೆ

ಸಂಗಮದಲ್ಲಿ ಕಾಂಗ್ರೆಸ್‌ನ 'ನೀರಿಗಾಗಿ ನಡಿಗೆ' ಪಾದಯಾತ್ರೆಗೆ ಚಾಲನೆ ನೀಡಲಾಯಿತು.

03:3409 Jan 2022

ಇಂದು ಸಂಗಮದಿಂದ ದೊಡ್ಡಆಲಹಳ್ಳಿ ವರೆಗೂ ಪಾದಯಾತ್ರೆ

ಇಂದು ಸಂಗಮದಿಂದ ದೊಡ್ಡಆಲಹಳ್ಳಿ ವರೆಗೂ ಪಾದಯಾತ್ರೆ 

02:3509 Jan 2022

ಮೇಕೆದಾಟು ‘ನೀರಿಗಾಗಿ ನಡಿಗೆ’: ಸಂಗಮ‌ ಚೆಕ್‌ಪೋಸ್ಟ್‌ನಲ್ಲಿ ಇಲ್ಲ ತಪಾಸಣೆ!

01:5709 Jan 2022

ಕುತೂಹಲ ಘಟ್ಟದಲ್ಲಿ ಪಾದಯಾತ್ರೆ

ದಕ್ಷಿಣ ಭಾರತೀಯರ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿಯ ತಟದಲ್ಲಿ ಭಾನುವಾರ ಮುಂಜಾನೆ ಮೇಕೆದಾಟು ಪಾದಯಾತ್ರೆ ಆರಂಭಿಸಲು ಕಾಂಗ್ರೆಸ್‌ ತುದಿಗಾಲಲ್ಲಿ ನಿಂತಿದೆ. ಪಾದಯಾತ್ರೆಗೆ ತಡೆಯೊಡ್ಡಲು ರಾಜ್ಯ ಸರ್ಕಾರವೂ ಪ್ರತಿತಂತ್ರ ರೂಪಿಸತೊಡಗಿದ್ದು....ಪೂರ್ಣ ಓದು: ಕುತೂಹಲ ಘಟ್ಟದಲ್ಲಿ ಪಾದಯಾತ್ರೆ: ಕನಕಪುರ ತಾಲ್ಲೂಕಿನ ಸಂಗಮ ಬಳಿ ಇಂದು ಚಾಲನೆ

01:5209 Jan 2022

ಸಂಗಮ‌ ಚೆಕ್‌ಪೋಸ್ಟ್‌ನಲ್ಲಿ ಇಲ್ಲ ತಪಾಸಣೆ...

ಸಂಗಮ‌ ಚೆಕ್‌ಪೋಸ್ಟ್‌ನಲ್ಲಿ ಯಾವುದೇ ತಪಾಸಣೆ ಇಲ್ಲದೆ ವಾಹನಗಳನ್ನು ಒಳಗೆ ಬಿಡಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಪಾದಯಾತ್ರೆಯ ನೇತೃತ್ವ ವಹಿಸಿ ಮುನ್ನಡೆಯಲಿದ್ದಾರೆ. ಸದ್ಯ ರಸ್ತೆಯಲ್ಲಿ ಎಲ್ಲೂ ಪೊಲೀಸ್ ತಪಾಸಣೆ ಇಲ್ಲ.

01:5109 Jan 2022

ಬೆಳಿಗ್ಗೆ 8:30ಕ್ಕೆ ಪಾದಯಾತ್ರೆಗೆ ಚಾಲನೆ


ಮೇಕೆದಾಟು ಸಂಗಮ ಪಾದಯಾತ್ರೆಗೆ ಕ್ಷಣಗಣನೆ ಆರಂಭ ಆಗಿದೆ. ಮುಂಜಾನೆಯಿಂದಲೇ‌ ನೂರಾರು ಮಂದಿ ಇಲ್ಲಿಗೆ ಧಾವಿಸುತ್ತಿದ್ದಾರೆ.‌ ಬೆಳಿಗ್ಗೆ 8:30ರ ವೇಳೆಗೆ ಪಾದಯಾತ್ರೆಗೆ ಚಾಲನೆ ದೊರೆಯಲಿದೆ.

01:0609 Jan 2022

ದೊಡ್ಡಾಲಹಳ್ಳಿಯಲ್ಲಿ‌ ಮೇಕೆದಾಟು ಪಾದಯಾತ್ರೆಗಾಗಿ ವಿದ್ಯುತ್ ದೀಪಗಳ ಅಲಂಕಾರ

01:0509 Jan 2022

ಕನಕಪುರ ತಾಲ್ಲೂಕಿನ ಸಂಗಮ ಬಳಿಯಿಂದ ಪಾದಯಾತ್ರೆ

ಕನಕಪುರ ತಾಲ್ಲೂಕಿನ ಕಾವೇರಿಯ ತಟ, ಸಂಗಮ ಬಳಿಯಿಂದ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಆರಂಭಿಸಲಿದೆ. ಪಾದಯಾತ್ರೆಗೆ ತಡೆಯೊಡ್ಡಲು ರಾಜ್ಯ ಸರ್ಕಾರವೂ ಪ್ರತಿತಂತ್ರ ರೂಪಿಸತೊಡಗಿದ್ದು, ‘ನೀರಿಗಾಗಿ ನಡಿಗೆ’ ಸೋಮವಾರಕ್ಕೂ ಮುಂದುವರಿಯುತ್ತದೆಯೇ ಎಂಬುದು ಸದ್ಯದ ಕುತೂಹಲವಾಗಿದೆ.

ಕನಕಪುರದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ನಾಯಕರೆಲ್ಲ ಒಗ್ಗಟ್ಟಾಗಿ ಪಾದಯಾತ್ರೆಯ ರಣಕಹಳೆ ಊದಿದರು. ‘ಜೈಲಿಗೆ ಕಳುಹಿಸಿದರೂ ಸಿದ್ಧ. ಎಲ್ಲಿ ನಮ್ಮನ್ನು ಬಂಧಿಸಿ ಬಿಡುಗಡೆ ಮಾಡುತ್ತೀರೋ ಅಲ್ಲಿಂದಲೇ ಮತ್ತೆ ನಡೆಯುತ್ತೇವೆ’ ಎಂದು ಗುಡುಗಿದರು. ಇಂದು ಕಾಂಗ್ರೆಸ್‌ನ ನೂರಕ್ಕೂ ಹೆಚ್ಚು ಶಾಸಕರು, ವಿಧಾನ ಪರಿಷತ್‌ ಸದಸ್ಯರ ಜೊತೆಗೆ ಜಿಲ್ಲೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.