ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಂಗಮದಿಂದ ಪಾದಯಾತ್ರೆ ಆರಂಭವಾಗಿದೆ.
ಐದು ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆಗಾಗಿ ಏನೂ ಮಾಡಿರಲಿಲ್ಲ. ಈಗ ಅಪರಾಧಿ ಮನೋಭಾವದಿಂದ ಪಾದಯಾತ್ರೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಂಗಮದಲ್ಲಿ ಕಾಂಗ್ರೆಸ್ನ 'ನೀರಿಗಾಗಿ ನಡಿಗೆ' ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಇಂದು ಸಂಗಮದಿಂದ ದೊಡ್ಡಆಲಹಳ್ಳಿ ವರೆಗೂ ಪಾದಯಾತ್ರೆ
ದಕ್ಷಿಣ ಭಾರತೀಯರ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿಯ ತಟದಲ್ಲಿ ಭಾನುವಾರ ಮುಂಜಾನೆ ಮೇಕೆದಾಟು ಪಾದಯಾತ್ರೆ ಆರಂಭಿಸಲು ಕಾಂಗ್ರೆಸ್ ತುದಿಗಾಲಲ್ಲಿ ನಿಂತಿದೆ. ಪಾದಯಾತ್ರೆಗೆ ತಡೆಯೊಡ್ಡಲು ರಾಜ್ಯ ಸರ್ಕಾರವೂ ಪ್ರತಿತಂತ್ರ ರೂಪಿಸತೊಡಗಿದ್ದು....ಪೂರ್ಣ ಓದು: ಕುತೂಹಲ ಘಟ್ಟದಲ್ಲಿ ಪಾದಯಾತ್ರೆ: ಕನಕಪುರ ತಾಲ್ಲೂಕಿನ ಸಂಗಮ ಬಳಿ ಇಂದು ಚಾಲನೆ
ಸಂಗಮ ಚೆಕ್ಪೋಸ್ಟ್ನಲ್ಲಿ ಯಾವುದೇ ತಪಾಸಣೆ ಇಲ್ಲದೆ ವಾಹನಗಳನ್ನು ಒಳಗೆ ಬಿಡಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಪಾದಯಾತ್ರೆಯ ನೇತೃತ್ವ ವಹಿಸಿ ಮುನ್ನಡೆಯಲಿದ್ದಾರೆ. ಸದ್ಯ ರಸ್ತೆಯಲ್ಲಿ ಎಲ್ಲೂ ಪೊಲೀಸ್ ತಪಾಸಣೆ ಇಲ್ಲ.
ಮೇಕೆದಾಟು ಸಂಗಮ ಪಾದಯಾತ್ರೆಗೆ ಕ್ಷಣಗಣನೆ ಆರಂಭ ಆಗಿದೆ. ಮುಂಜಾನೆಯಿಂದಲೇ ನೂರಾರು ಮಂದಿ ಇಲ್ಲಿಗೆ ಧಾವಿಸುತ್ತಿದ್ದಾರೆ. ಬೆಳಿಗ್ಗೆ 8:30ರ ವೇಳೆಗೆ ಪಾದಯಾತ್ರೆಗೆ ಚಾಲನೆ ದೊರೆಯಲಿದೆ.
ಕನಕಪುರ ತಾಲ್ಲೂಕಿನ ಕಾವೇರಿಯ ತಟ, ಸಂಗಮ ಬಳಿಯಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರಂಭಿಸಲಿದೆ. ಪಾದಯಾತ್ರೆಗೆ ತಡೆಯೊಡ್ಡಲು ರಾಜ್ಯ ಸರ್ಕಾರವೂ ಪ್ರತಿತಂತ್ರ ರೂಪಿಸತೊಡಗಿದ್ದು, ‘ನೀರಿಗಾಗಿ ನಡಿಗೆ’ ಸೋಮವಾರಕ್ಕೂ ಮುಂದುವರಿಯುತ್ತದೆಯೇ ಎಂಬುದು ಸದ್ಯದ ಕುತೂಹಲವಾಗಿದೆ.
ಕನಕಪುರದಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ನಾಯಕರೆಲ್ಲ ಒಗ್ಗಟ್ಟಾಗಿ ಪಾದಯಾತ್ರೆಯ ರಣಕಹಳೆ ಊದಿದರು. ‘ಜೈಲಿಗೆ ಕಳುಹಿಸಿದರೂ ಸಿದ್ಧ. ಎಲ್ಲಿ ನಮ್ಮನ್ನು ಬಂಧಿಸಿ ಬಿಡುಗಡೆ ಮಾಡುತ್ತೀರೋ ಅಲ್ಲಿಂದಲೇ ಮತ್ತೆ ನಡೆಯುತ್ತೇವೆ’ ಎಂದು ಗುಡುಗಿದರು. ಇಂದು ಕಾಂಗ್ರೆಸ್ನ ನೂರಕ್ಕೂ ಹೆಚ್ಚು ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆಗೆ ಜಿಲ್ಲೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.