ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು: ಎರಡನೇ ದಿನದ ಪಾದಯಾತ್ರೆ ಆರಂಭ

Last Updated 10 ಜನವರಿ 2022, 5:38 IST
ಅಕ್ಷರ ಗಾತ್ರ

ರಾಮನಗರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯು ಎರಡನೇ ದಿನವಾದ ಸೋಮವಾರ ದೊಡ್ಡಾಲಹಳ್ಳಿಯಿಂದ ಆರಂಭ ಆಯಿತು.

ಡಿ.ಕೆ. ಶಿವಕುಮಾರ್ ಅವರ ಸ್ವಗ್ರಾಮವೂ ಆದ ದೊಡ್ಡಾಲಹಳ್ಳಿಯಿಂದ ಕನಕಪುರ ಕಡೆಗೆ ಪಾದಯಾತ್ರಿಗರು ಹೆಜ್ಜೆ ಇಟ್ಟಿದ್ದು, ಕಾಂಗ್ರೆಸ್ ನ‌ ಅನೇಕ ನಾಯಕರು ಸಾಥ್ ನೀಡಿದ್ದಾರೆ. ಈ ದಿನ ಒಟ್ಟು 15 ಕಿ.ಮೀ. ಕ್ರಮಿಸಲಿದ್ದಾರೆ.

ಸಿದ್ದರಾಮಯ್ಯ ಭಾಗಿ:
' ಸೋಮವಾರದ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಸಹ ಭಾಗಿ ಆಗಲಿದ್ದಾರೆ. ಇನ್ನು ಸ್ವಲ್ಪ ಹೊತ್ತಿನಲ್ಲಿ ನಮ್ಮ ಜೊತೆ ಸೇರಿಕೊಳ್ಳಲಿದ್ದಾರೆ' ಎಂದು ಶಿವಕುಮಾರ್ ದೊಡ್ಡಾಲಹಳ್ಳಿಯಲ್ಲಿ ಪತ್ರಕರ್ತರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT