ಆದೇಶವಿಲ್ಲ: ಪಾದಯಾತ್ರೆ ತಡೆಯುವಂತೆ ಇಲ್ಲವೇ ಕಾರ್ಯಕರ್ತರನ್ನು ಬಂಧಿಸುವಂತೆ ಸರ್ಕಾರದಿಂದ ಸದ್ಯದವರೆಗೆ ಯಾವುದೇ ಆದೇಶ ಬಂದಿಲ್ಲ. ಕೇವಲ ಸಂಚಾರ ಮಾರ್ಗಗಳನ್ನು ಬದಲಿಸಿದ್ದೇವೆ. ಪಾದಯಾತ್ರೆಗೆಂದು ಹೊರ ಜಿಲ್ಲೆಯಿಂದ ಬರುವವರಿಗೆ ರಾಮನಗರಕ್ಕೆ ಪ್ರವೇಶ ನೀಡುವುದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು.
ಬೆಳಿಗ್ಗೆ 9ಕ್ಕೆ ಪಾದಯಾತ್ರೆ ಆರಂಭ ಆಗುವ ನಿರೀಕ್ಷೆ ಇದೆ. ಈ ದಿನ ರಾಮನಗರದಿಂದ ಬಿಡದಿವರೆಗೆ ನಡಿಗೆ ಕೈಗೊಳ್ಳಲಿದ್ದಾರೆ.