‘ಮೊದಲು ಬೆಂಗಳೂರಿನಲ್ಲೇ ಐದು ದಿನ ಪಾದಯಾತ್ರೆಗೆ ನಿರ್ಧರಿಸಿದ್ದೆವು. ಆದರೆ ರಾಜ್ಯ ಬಜೆಟ್ ಇರುವ ಕಾರಣ ಅಲ್ಲಿ ಮೂರು ದಿನ ಮಾತ್ರ ನೀರಿಗಾಗಿ ನಡಿಗೆ ನಡೆಯಲಿದೆ. ಮೊದಲ ದಿನ ರಾಮನಗರದಿಂದ ಬಿಡದಿ ಹಾಗೂ ಎರಡನೇ ದಿನ ಬಿಡದಿಯಿಂದ ಕೆಂಗೇರಿವರೆಗೆ ನಿಗದಿಯಂತೆ ಕಾರ್ಯಕ್ರಮ ನಡೆಯಲಿದೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳುತ್ತಾರೆ’ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯದ ಬಗ್ಗೆ ಪ್ರತಿಕ್ರಿಯಿಸಿ ‘ಅವರು ಪ್ರಧಾನಮಂತ್ರಿ ಕುಟುಂಬದವರು. ಅವರಿಗಿರುವ ಬುದ್ಧಿ, ತಿಳಿವಳಿಕೆ ರಾಜ್ಯದಲ್ಲಿ ಮತ್ಯಾರಿಗೂ ಇಲ್ಲ. ರಾಜ್ಯ– ರಾಷ್ಟ್ರಕ್ಕಾಗಿ ಅವರು ಏನು ಹೇಳುತ್ತಾರೋ ಅದನ್ನೆಲ್ಲ ನಾವು ಕೇಳಬೇಕು ಅಷ್ಟೇ. ಅದನ್ನು ಪ್ರಶ್ನಿಸಬಾರದು’ ಎಂದು ತಿರುಗೇಟು ನೀಡಿದರು.