ಕಲಾವಿದ ’ಮುಖ್ಯಮಂತ್ರಿ‘ ಚಂದ್ರು, ‘ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ 2018ರಲ್ಲಿಯೇ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಕೇಂದ್ರ ಸರ್ಕಾರ ಕೂಡ ತಾತ್ವಿಕ ಒಪ್ಪಿಗೆ ನೀಡಿದೆ. ಈ ಯೋಜನೆಯಿಂದ ನಮಗೆ ಅಂತಿಮವಾಗಿ 4.75 ಟಿಎಂಸಿ ಅಡಿ ಕುಡಿಯುವ ನೀರು ದೊರೆಯಲಿದೆ. ಉಳಿದ ನೀರು ತಮಿಳುನಾಡಿಗೆ ಹೋಗಲಿದೆ. ಅನಗತ್ಯವಾಗಿ ಅವರು ಕ್ಯಾತೆ ತೆಗೆಯುತ್ತಿದ್ದಾರೆ. ನಮ್ಮ ನೆಲ, ಜಲವನ್ನು ಅವರು ನಿರಂತರ ಕಬಳಿಸುತ್ತಾ ಬಂದಿದ್ದಾರೆ. ಹಾಗಾಗಿ, ಯೋಜನೆ ಅನುಷ್ಠಾನದ ವಿಚಾರವಾಗಿ ಧ್ವನಿಯೆತ್ತಬೇಕಾಗಿದೆ. ನಮ್ಮ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು’ ಎಂದರು.