ಜಿಲ್ಲೆಯಲ್ಲಿರುವ ಸಂಗಮ–ಮೇಕೆದಾಟು ಪ್ರದೇಶದಲ್ಲಿ ಕಾವೇರಿ ನದಿಗೆ ₹ 9 ಸಾವಿರ ಕೋಟಿ ವೆಚ್ಚದಲ್ಲಿ ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಜಲಾಶಯಕ್ಕಾಗಿ ಸುಮಾರು 4,996 ಹೆಕ್ಟೇರ್ ಪ್ರದೇಶವು ಮುಳುಗಡೆ ಆಗಲಿದ್ದು, ಇದರಲ್ಲಿ 4716 ಹೆಕ್ಟೇರ್ ಅರಣ್ಯ ಪ್ರದೇಶವೇ ಆಗಿದೆ. ಅದರಲ್ಲಿಯೂ 2,800 ಹೆಕ್ಟೇರ್ನಷ್ಟು ಪ್ರದೇಶವು ಕಾವೇರಿ ವನ್ಯಧಾಮಕ್ಕೆ ಸೇರಿದೆ.