‘ಯೋಜನೆಗೆ ಪರಿಸರ ಇಲಾಖೆ ಅನುಮತಿ ಸಿಕ್ಕಿದೆ. ಹೀಗಾಗಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು, ಇತರ ಇಲಾಖೆಗಳ ಅನುಮತಿ ಪಡೆದು, ಆದಷ್ಟು ಬೇಗ ಗುದ್ದಲಿ ಪೂಜೆ ಮಾಡಿ, ಕೆಲಸ ಆರಂಭಿಸಲಿ. ಬೇರೆಯವರ ಮೇಲೆ ದೂರುತ್ತಾ ಕೂರುವುದಲ್ಲ. ಕೆಲಸ ಆರಂಭಿಸಬೇಡಿ ಎಂದು ಯಾವುದಾದರೂ ಆದೇಶ ಇದೆಯೇ’ ಎಂದು ಪ್ರಶ್ನಿಸಿದ ಶಿವಕುಮಾರ್, ‘ನೀವು ಕೆಲಸ ಆರಂಭಿಸಿ. ನಿಮಗೆ ಬೇಕಾದ ಎಲ್ಲ ರೀತಿಯ ಸಹಕಾರ ನಾವು ನೀಡುತ್ತೇವೆ. ಸರ್ಕಾರ ಯಾಕೆ ಇಚ್ಛಾಶಕ್ತಿ ತೋರುತ್ತಿಲ್ಲ ಎನ್ನುವುದು ಗೊತ್ತಿಲ್ಲ’ ಎಂದರು.