ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು: ಪರಿಷತ್‌ನಲ್ಲೂ ಒಮ್ಮತದ ನಿರ್ಣಯ

Last Updated 25 ಮಾರ್ಚ್ 2022, 20:16 IST
ಅಕ್ಷರ ಗಾತ್ರ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಾಕಿ ಇರುವ ಅನುಮತಿಗಳನ್ನು ತ್ವರಿತ ವಾಗಿ ನೀಡುವಂತೆ ಒತ್ತಾಯಿಸಿ ವಿಧಾನ ಪರಿಷತ್‌ನಲ್ಲೂ ಶುಕ್ರವಾರ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಯಿತು.

ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ಕೈಗೊಂಡಿರುವ ನಿರ್ಣಯವನ್ನು ಖಂಡಿಸುವ ಹಾಗೂ ಕಾವೇರಿ ಕಣಿವೆಯಲ್ಲಿ ತಮಿಳುನಾಡು ಕೈಗೊಳ್ಳುತ್ತಿರುವ ಯೋಜನೆಗಳಿಗೆ ಅನುಮತಿ ನೀಡದಂತೆ ಆಗ್ರಹಿಸುವ ಅಂಶಗಳೂ ನಿರ್ಣಯದಲ್ಲಿವೆ.

ಕರ್ನಾಟಕದ ಒಪ್ಪಿಗೆ ಇಲ್ಲದೆ ನದಿ ಜೋಡಣೆ ಯೋಜನೆಯನ್ನು ಅಂತಿಮಗೊಳಿಸಬಾರದು ಮತ್ತು ಸದ್ಯ ರೂಪಿಸಿರುವ ವಿಸ್ತೃತ ಯೋಜನಾ ವರದಿಗೆ ಒಪ್ಪಿಗೆ ನೀಡಬಾರದು ಎಂಬ ಆಗ್ರಹವೂ ನಿರ್ಣಯದಲ್ಲಿದೆ.

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ನಿರ್ಣಯ ಮಂಡಿಸಿ ದರು. ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ನಿರ್ಣಯವನ್ನು ಬೆಂಬಲಿಸಿದರು. ಬಳಿಕ ಧ್ವನಿಮತದ ಮೂಲಕ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT