ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಆಯೋಜಿಸಿರುವ ಪಾದಯಾತ್ರೆಗೆ ನಾನು ಹೋಗುತ್ತೇನೆ, ನೀವೂ ಬನ್ನಿ: ಸಿದ್ದರಾಮಯ್ಯ

Last Updated 8 ಡಿಸೆಂಬರ್ 2021, 10:32 IST
ಅಕ್ಷರ ಗಾತ್ರ

ಬೆಂಗಳೂರು: ಮೇಕೆದಾಟು ಯೋಜನೆಯ ಶೀಘ್ರ ಜಾರಿಯಾಗಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯುವ ಪಾದಯಾತ್ರೆಯಲ್ಲಿ ನಾನು ಭಾಗವಹಿಸುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದೇ ನಮ್ಮ ಸರ್ಕಾರ. ಯೋಜನೆ ಶೀಘ್ರ ಜಾರಿಯಾಗಬೇಕು ಎಂದು ಒತ್ತಾಯಿಸಿ ಪಾದಯಾತ್ರೆ ನಡೆಸಲು ತೀರ್ಮಾನ ಮಾಡಿರುವುದು ಕಾಂಗ್ರೆಸ್ ಪಕ್ಷ. ಪಾದಯಾತ್ರೆಗೆ ನಾನು ಹೋಗ್ತೇನೆ. ಡಿ.ಕೆ. ಶಿವಕುಮಾರ್‌ ಅವರೂ ಬರುತ್ತಾರೆ. ರಾಜ್ಯದ ಹಿತಾಸಕ್ತಿಯ ಕಾಳಜಿ ಇದ್ದವರು ಯಾರಾದರೂ ಬರಬಹುದು’ ಎಂದು ತಿಳಿಸಿದ್ದಾರೆ.

ಡಿಕೆಶಿ ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗುವ ಸಾಧ್ಯತೆ ಇದೆಯೇ? ಎಂದು ಮಂಗಳವಾರ ಬಿಜೆಪಿ ಪ್ರಶ್ನಿಸಿತ್ತು. ಇದೀಗ ತಾವು ಪಾದಯಾತ್ರೆಯಲ್ಲಿ ಭಾಗವಹಿಸುತ್ತೇನೆ ಎಂದು ಖಚಿತಪಡಿಸುವ ಮೂಲಕ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT