ಚೆನ್ನೈನಲ್ಲಿರುವ ಎನ್ಜಿಟಿ ಪೀಠವು ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಣಾ ಪ್ರಕರಣ ದಾಖಲಿಸಿಕೊಂಡಿತ್ತು. ಈ ಕುರಿತು ಕಾನೂನು ಇಲಾಖೆ, ಅಡ್ವೋಕೇಟ್ ಜನರಲ್ ಹಾಗೂ ಕಾನೂನು ತಜ್ಞರ ತಂಡ ಕೂಲಂಕಶ ಚರ್ಚೆ ಮಾಡಿತ್ತಲ್ಲದೇ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಇದನ್ನು ನವದೆಹಲಿಯ ಎನ್ಜಿಟಿ ಪೀಠದ ಮುಂದೆ ಮಂಡಿಸಲಾಯಿತು ಎಂದು ಅವರು ಹೇಳಿದ್ದಾರೆ.