ದೂರುದಾರ ಜಯಕುಮಾರ್ ಹಿರೇಮಠ್ ಪರ ವಕೀಲರು ಹಾಜರಾಗಿ, ಲೋಕಾಯುಕ್ತ ಪೊಲೀಸರಿಗೆ ದೂರು ದಾಖಲಿಸುವ ಮುನ್ನ ಪೂವಾನುಮತಿ ಪಡೆದಿಲ್ಲ. ಹೀಗಾಗಿ, ದೂರು ಹಿಂಪಡೆಯಲು ಅನುಮತಿ ನೀಡುವಂತೆ ಕೋರಿ ಮೆಮೊ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ‘ಡಿ.11ರಂದು ದೂರುದಾರರು ಖುದ್ದು ಹಾಜರಾಗಿ ಈ ಕುರಿತು ವಿವರಣೆ ನೀಡಬೇಕು’ ಎಂದು ಅಭಿಪ್ರಾಯಪಟ್ಟಿತು.