‘ಮಹಿಳೆಯರನ್ನು ಕೆಲಸದಿಂದ ಏಕಾಏಕಿ ಬಿಡುಗಡೆ ಮಾಡಿರುವುದನ್ನು ರದ್ದುಪಡಿಸಬೇಕು ಸೇರಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಇತ್ತೀಚೆಗೆ ಪ್ರತಿಭಟನೆ ನಡೆಸಲಾಗಿತ್ತು. ಮುಖಂಡರ ನಿಯೋಗದ ಜೊತೆ ಮಾತುಕತೆ ನಡೆಸಿದ್ದ ಸರ್ಕಾರದ ಅಧಿಕಾರಿಗಳು, ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಬೇಡಿಕೆ ಈಡೇರಿಲ್ಲ. ಹೀಗಾಗಿ, ಪುನಃ ಧರಣಿ ಆರಂಭಿಸಿದ್ದೇವೆ’ ಎಂದು ಪ್ರತಿಭಟನಕಾರರು ಹೇಳಿದ್ದಾರೆ.