<p><strong>ಬೆಂಗಳೂರು</strong>: ನಿವೃತ್ತಿ ಹೊಂದಿರುವ ಅಕ್ಷರ ದಾಸೋಹ ನೌಕರರಿಗೆ ನಿವೃತ್ತಿ ವೇತನ ಮತ್ತು ₹1 ಲಕ್ಷ ಇಡುಗಂಟು ನೀಡಬೇಕು ಎಂಬ ಬೇಡಿಕೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟವನ್ನು ನೌಕರರು ಹಿಂಪಡೆದಿದ್ದಾರೆ.</p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ಆರಂಭಿಸಿದ್ದ ನೌಕರರು ಅಹೋರಾತ್ರಿ ಧರಣಿ ನಡೆಸಿದ್ದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರ ಜತೆ ನೌಕರರ ಸಂಘದ ಪದಾಧಿ ಕಾರಿಗಳು ಬುಧವಾರ ಸಭೆ ನಡೆಸಿದರು.</p>.<p>‘ಬೇಡಿಕೆಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಗೆ ಸೆಲ್ವಕುಮಾರ್ ಶಿಫಾರಸು ಮಾಡಿದ್ದಾರೆ. ಇಲಾಖೆ ಕೇಳಿರುವ ಮಾಹಿತಿ ಒದಗಿಸಲು ಪ್ರಯತ್ನಿಸುತ್ತಿರುವ ಬಗ್ಗೆಯೂ ನಮಗೆ ವಿವರಿಸಿದರು’ ಎಂದು ಸಂಘದ ಗೌರವಾಧ್ಯಕ್ಷೆ ಎಸ್.ವರಲಕ್ಷ್ಮಿ ತಿಳಿಸಿದರು.</p>.<p>‘ಸಭೆಯ ನಡಾವಳಿಯನ್ನು ಲಿಖಿತವಾಗಿ ಒದಗಿಸಿದ ಬಳಿಕವೇ ಪ್ರತಿಭಟನೆ ಹಿಂಪಡೆಯಲು ನಿರ್ಧರಿಸಲಾಯಿತು. ಅಲ್ಲದೇ ಮುಖ್ಯಮಂತ್ರಿ ಅವರನ್ನು ನಾವು ಭೇಟಿ ಮಾಡಿದ್ದು, ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಮಾತನಾಡುವುದಾಗಿ ಅವರೂ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.</p>.<p>‘ನಿವೃತ್ತಿ ವೇತನಕ್ಕೆ ಸಂಬಂಧಿಸಿದಂತೆ ಹಣಕಾಸು ಇಲಾಖೆ ಕೇಳಿರುವ ಮಾಹಿತಿ ಯನ್ನು ಒದಗಿಸಿ 15 ದಿನಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಸೆಲ್ವಕುಮಾರ್ ತಿಳಿಸಿದ್ದಾರೆ. ಆದ್ದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದೇವೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತಾ ತಿಳಿಸಿದರು.</p>.<p class="Briefhead"><strong>ಶೌಚ, ಊಟಕ್ಕೆ ಪರದಾಡಿದ ನೌಕರರು</strong><br />ಮಂಗಳವಾರ ರಾತ್ರಿ ಚಳಿಯನ್ನೂ ಲೆಕ್ಕಿಸದೆ ಸ್ವಾತಂತ್ರ್ಯ ಉದ್ಯಾನದಲ್ಲೇ ನೌಕರರು ಪ್ರತಿಭಟನೆ ನಡೆಸಿದರು.</p>.<p>ಸಾವಿರಾರು ಸಂಖ್ಯೆಯಲ್ಲಿದ್ದ ಮಹಿಳೆಯರು, ಶೌಚಕ್ಕೆ ಪರದಾಡಬೇಕಾಯಿತು. ‘ಸ್ವಾತಂತ್ರ್ಯ ಉದ್ಯಾನದಲ್ಲಿರುವ ಬೆರಳೆಣಿಕೆಯಷ್ಟು ಶೌಚಾಲಯ, ಗಾಂಧಿನಗರದಲ್ಲಿನ ಸಣ್ಣ ಪುಟ್ಟ ಹೋಟೆಲ್ಗಳನ್ನು ಹುಡುಕಿ ಶೌಚಕ್ಕೆ ಬಳಸಿದೆವು’ ಎಂದು ನೌಕರರು ಹೇಳಿದರು.</p>.<p>ರಾಜ್ಯದ ಎಲ್ಲೆಡೆಯಿಂದ ಬಂದಿದ್ದ ನೌಕರರಲ್ಲಿ ಕೆಲವರು ರೊಟ್ಟಿ ಮತ್ತು ಚಪಾತಿ ಬುತ್ತಿಗಳನ್ನು ತಂದಿದ್ದು, ಅದನ್ನೇ ಎರಡು ದಿನ ಸೇವಿಸಿದರು. ಬುತ್ತಿ ತರದೆ ಬಂದಿದ್ದವರು ಊಟಕ್ಕಾಗಿ ಪರಿತಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಿವೃತ್ತಿ ಹೊಂದಿರುವ ಅಕ್ಷರ ದಾಸೋಹ ನೌಕರರಿಗೆ ನಿವೃತ್ತಿ ವೇತನ ಮತ್ತು ₹1 ಲಕ್ಷ ಇಡುಗಂಟು ನೀಡಬೇಕು ಎಂಬ ಬೇಡಿಕೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟವನ್ನು ನೌಕರರು ಹಿಂಪಡೆದಿದ್ದಾರೆ.</p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ಆರಂಭಿಸಿದ್ದ ನೌಕರರು ಅಹೋರಾತ್ರಿ ಧರಣಿ ನಡೆಸಿದ್ದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರ ಜತೆ ನೌಕರರ ಸಂಘದ ಪದಾಧಿ ಕಾರಿಗಳು ಬುಧವಾರ ಸಭೆ ನಡೆಸಿದರು.</p>.<p>‘ಬೇಡಿಕೆಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಗೆ ಸೆಲ್ವಕುಮಾರ್ ಶಿಫಾರಸು ಮಾಡಿದ್ದಾರೆ. ಇಲಾಖೆ ಕೇಳಿರುವ ಮಾಹಿತಿ ಒದಗಿಸಲು ಪ್ರಯತ್ನಿಸುತ್ತಿರುವ ಬಗ್ಗೆಯೂ ನಮಗೆ ವಿವರಿಸಿದರು’ ಎಂದು ಸಂಘದ ಗೌರವಾಧ್ಯಕ್ಷೆ ಎಸ್.ವರಲಕ್ಷ್ಮಿ ತಿಳಿಸಿದರು.</p>.<p>‘ಸಭೆಯ ನಡಾವಳಿಯನ್ನು ಲಿಖಿತವಾಗಿ ಒದಗಿಸಿದ ಬಳಿಕವೇ ಪ್ರತಿಭಟನೆ ಹಿಂಪಡೆಯಲು ನಿರ್ಧರಿಸಲಾಯಿತು. ಅಲ್ಲದೇ ಮುಖ್ಯಮಂತ್ರಿ ಅವರನ್ನು ನಾವು ಭೇಟಿ ಮಾಡಿದ್ದು, ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಮಾತನಾಡುವುದಾಗಿ ಅವರೂ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.</p>.<p>‘ನಿವೃತ್ತಿ ವೇತನಕ್ಕೆ ಸಂಬಂಧಿಸಿದಂತೆ ಹಣಕಾಸು ಇಲಾಖೆ ಕೇಳಿರುವ ಮಾಹಿತಿ ಯನ್ನು ಒದಗಿಸಿ 15 ದಿನಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಸೆಲ್ವಕುಮಾರ್ ತಿಳಿಸಿದ್ದಾರೆ. ಆದ್ದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದೇವೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತಾ ತಿಳಿಸಿದರು.</p>.<p class="Briefhead"><strong>ಶೌಚ, ಊಟಕ್ಕೆ ಪರದಾಡಿದ ನೌಕರರು</strong><br />ಮಂಗಳವಾರ ರಾತ್ರಿ ಚಳಿಯನ್ನೂ ಲೆಕ್ಕಿಸದೆ ಸ್ವಾತಂತ್ರ್ಯ ಉದ್ಯಾನದಲ್ಲೇ ನೌಕರರು ಪ್ರತಿಭಟನೆ ನಡೆಸಿದರು.</p>.<p>ಸಾವಿರಾರು ಸಂಖ್ಯೆಯಲ್ಲಿದ್ದ ಮಹಿಳೆಯರು, ಶೌಚಕ್ಕೆ ಪರದಾಡಬೇಕಾಯಿತು. ‘ಸ್ವಾತಂತ್ರ್ಯ ಉದ್ಯಾನದಲ್ಲಿರುವ ಬೆರಳೆಣಿಕೆಯಷ್ಟು ಶೌಚಾಲಯ, ಗಾಂಧಿನಗರದಲ್ಲಿನ ಸಣ್ಣ ಪುಟ್ಟ ಹೋಟೆಲ್ಗಳನ್ನು ಹುಡುಕಿ ಶೌಚಕ್ಕೆ ಬಳಸಿದೆವು’ ಎಂದು ನೌಕರರು ಹೇಳಿದರು.</p>.<p>ರಾಜ್ಯದ ಎಲ್ಲೆಡೆಯಿಂದ ಬಂದಿದ್ದ ನೌಕರರಲ್ಲಿ ಕೆಲವರು ರೊಟ್ಟಿ ಮತ್ತು ಚಪಾತಿ ಬುತ್ತಿಗಳನ್ನು ತಂದಿದ್ದು, ಅದನ್ನೇ ಎರಡು ದಿನ ಸೇವಿಸಿದರು. ಬುತ್ತಿ ತರದೆ ಬಂದಿದ್ದವರು ಊಟಕ್ಕಾಗಿ ಪರಿತಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>