<p><strong>ಬೆಂಗಳೂರು:</strong> ಮದ್ಯದ ಅಂಗಡಿ ಉಪಗುತ್ತಿಗೆ ನೀಡುವಾಗ ಜನಪ್ರತಿನಿಧಿಗಳ ಶಿಫಾರಸು ಪರಿಗಣಿಸುವುದಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸುವಂತೆ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ಗೆ (ಎಂಎಸ್ಐಎಲ್) ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಈ ನಡುವೆ ಶಿಫಾರಸು ಪತ್ರ ನೀಡಿ ಅದನ್ನು ವಾಪಸ್ ಪಡೆದ ಪಶುಸಂಗೋಪನಾ ಸಚಿವ ಪ್ರಭು ಬಿ. ಚೌವ್ಹಾಣ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರಲು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಿರ್ಧರಿಸಿತು.</p>.<p>ಬೀದರ್ ಜಿಲ್ಲೆಯಸೋಮನಾಥ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ಹಿಂದಿನ ವಿಚಾರಣೆ ವೇಳೆ ಸಚಿವರನ್ನೂ ಪ್ರತಿವಾದಿಯನ್ನಾಗಿ ಮಾಡುವಂತೆ ಅರ್ಜಿದಾರರಿಗೆ ಸೂಚಿಸಿತ್ತು.</p>.<p>‘ಅದು ಶಿಫಾರಸು ಅಲ್ಲ, ಮನವಿಯ ಟಿಪ್ಪಣಿ ಎಂದು ಸಚಿವರು ಅಫಿಡವಿಟ್ ಸಲ್ಲಿಸಿದ್ದಾರೆ. ಮನವಿಯಾದರೂ ಅಧಿಕಾರಿಗಳು ಅದನ್ನು ಯಾವ ರೀತಿ ಪರಿಗಣಿಸುತ್ತಾರೆ ಎಂಬುದು ಗೊತ್ತಿದೆ. ಆದರೂ ಅವರ ವಿರುದ್ಧ ಹೆಚ್ಚಿನ ನಿರ್ದೇಶನ ನೀಡುವ ಅಗತ್ಯವಿಲ್ಲ’ ಎಂದು ಪೀಠ ಹೇಳಿತು.</p>.<p>‘ವಿಧಾನಸಭಾ ಕ್ಷೇತ್ರವಾರು ಎಂಎಸ್ಐಎಲ್ ಮದ್ಯ ಮಳಿಗೆ ತೆರೆಯುವ ಸಂಬಂಧ ಅಬಕಾರಿ ಇಲಾಖೆ ಹೊರಡಿಸಿದ ಆದೇಶವು ಜನಪ್ರತಿನಿಧಿಗಳು ತಮ್ಮ ಬೆಂಬಲಿಗರಿಗೆ ಪರವಾನಗಿ ಕೊಡಿಸಲು ಅನುಕೂಲವಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮದ್ಯದ ಅಂಗಡಿ ಉಪಗುತ್ತಿಗೆ ನೀಡುವಾಗ ಜನಪ್ರತಿನಿಧಿಗಳ ಶಿಫಾರಸು ಪರಿಗಣಿಸುವುದಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸುವಂತೆ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ಗೆ (ಎಂಎಸ್ಐಎಲ್) ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಈ ನಡುವೆ ಶಿಫಾರಸು ಪತ್ರ ನೀಡಿ ಅದನ್ನು ವಾಪಸ್ ಪಡೆದ ಪಶುಸಂಗೋಪನಾ ಸಚಿವ ಪ್ರಭು ಬಿ. ಚೌವ್ಹಾಣ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರಲು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಿರ್ಧರಿಸಿತು.</p>.<p>ಬೀದರ್ ಜಿಲ್ಲೆಯಸೋಮನಾಥ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ಹಿಂದಿನ ವಿಚಾರಣೆ ವೇಳೆ ಸಚಿವರನ್ನೂ ಪ್ರತಿವಾದಿಯನ್ನಾಗಿ ಮಾಡುವಂತೆ ಅರ್ಜಿದಾರರಿಗೆ ಸೂಚಿಸಿತ್ತು.</p>.<p>‘ಅದು ಶಿಫಾರಸು ಅಲ್ಲ, ಮನವಿಯ ಟಿಪ್ಪಣಿ ಎಂದು ಸಚಿವರು ಅಫಿಡವಿಟ್ ಸಲ್ಲಿಸಿದ್ದಾರೆ. ಮನವಿಯಾದರೂ ಅಧಿಕಾರಿಗಳು ಅದನ್ನು ಯಾವ ರೀತಿ ಪರಿಗಣಿಸುತ್ತಾರೆ ಎಂಬುದು ಗೊತ್ತಿದೆ. ಆದರೂ ಅವರ ವಿರುದ್ಧ ಹೆಚ್ಚಿನ ನಿರ್ದೇಶನ ನೀಡುವ ಅಗತ್ಯವಿಲ್ಲ’ ಎಂದು ಪೀಠ ಹೇಳಿತು.</p>.<p>‘ವಿಧಾನಸಭಾ ಕ್ಷೇತ್ರವಾರು ಎಂಎಸ್ಐಎಲ್ ಮದ್ಯ ಮಳಿಗೆ ತೆರೆಯುವ ಸಂಬಂಧ ಅಬಕಾರಿ ಇಲಾಖೆ ಹೊರಡಿಸಿದ ಆದೇಶವು ಜನಪ್ರತಿನಿಧಿಗಳು ತಮ್ಮ ಬೆಂಬಲಿಗರಿಗೆ ಪರವಾನಗಿ ಕೊಡಿಸಲು ಅನುಕೂಲವಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>