‘ಮಳೆಯಿಂದ ಕೊಚ್ಚಿ ಹೋಗಿರುವಕೃಷಿ ಜಮೀನುಗಳಿಗೆ ಹೋಗುವ ದಾರಿಗಳನ್ನು ಸರಿಪಡಿಸಲು ಸರ್ಕಾರ ಹಣ ಮಂಜೂರು ಮಾಡಬೇಕು. 60 ವರ್ಷ ಮೇಲ್ಪಟ್ಟ ಎಲ್ಲ ರೈತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ₹10 ಲಕ್ಷಗಳವರೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಬೇಕು’ ಎಂದು ಸಂಘದ ಬೆಂಗಳೂರು ಘಟಕದ ಅಧ್ಯಕ್ಷಪಂಪಣ್ಣ ಆಗ್ರಹಿಸಿದರು. ‘ಬಗರ್ಹುಕುಂ ಸಾಗುವಳಿ ಸಕ್ರಮ ಯೋಜನೆ
ಯಡಿ ಮಂಜೂರಾದ ಭೂಮಿಗೆ ಖಾತೆ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ನಿವಾರಿಸಬೇಕು. ರೈತರ ಮಕ್ಕಳಿಗೆ ಉಚಿತ ಉನ್ನತ ಶಿಕ್ಷಣ ನೀಡಬೇಕು. ಕೋವಿಡ್ನಿಂದ ನಷ್ಟಕ್ಕೆ ಸಿಲುಕಿರುವ ರೈತರಸಾಲ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.