ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನಂಜನಗೂಡಿನ ರೈತ ಕೆಂಡಗಣ್ಣಸ್ವಾಮಿ, ‘ ಸಿಹಿಗುಂಬಳ ಖರೀದಿಸಲು ವ್ಯಾಪಾರಿಗಳು ಬರುತ್ತಿಲ್ಲ. ಮಧ್ಯವರ್ತಿಗಳು ಕರುಣೆ ಇಲ್ಲದೆ ಕಡಿಮೆ ದರ ನಿಗದಿ ಮಾಡಿದ್ದಾರೆ. ಅದರಿಂದ ನಮಗೆ ಸಾಗಾಣಿಕೆ ವೆಚ್ಚವೂ ಸಿಗುವುದಿಲ್ಲ. ಹೊಲದಲ್ಲೇ ಕುಂಬಳವನ್ನು ಬಿಡುವೆ, ಮಾರುಕಟ್ಟೆಗೆ ತರುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.