ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಿ ಕುಸಿತ: ಮೂವರು ಕಾರ್ಮಿಕರ ಸಾವು

ಮಡಹಳ್ಳಿ ದುರಂತದ ನೆನಪು ಹಸಿಯಾಗಿರುವಾಗಲೇ ಮತ್ತೊಂದು ದುರಂತ
Last Updated 26 ಡಿಸೆಂಬರ್ 2022, 20:30 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ ಗ್ರಾಮದ ಬಿಳಿಕಲ್ಲು ಕ್ವಾರಿಯೊಂದರಲ್ಲಿ ಸೋಮವಾರ ಕಲ್ಲು ಕುಸಿದು ಕಾಗಲವಾಡಿ ಮೋಳೆಯ ಕಾರ್ಮಿಕರಾದ ಕುಮಾರ್ (28), ಶಿವರಾಜು (35) ಮತ್ತು ಸಿದ್ದರಾಜು (27) ಎಂಬವರು ಮೃತಪಟ್ಟಿದ್ದಾರೆ. ‘ಗಣಿಯಲ್ಲಿ 12 ಕಾರ್ಮಿಕರು ಕೆಲಸ ಮಾಡುತ್ತಿದ್ದರು’ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇದೇ ವರ್ಷ ಮಾರ್ಚ್‌ 4ರಂದು ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯಲ್ಲಿ ಬಿಳಿಕಲ್ಲು ಕ್ವಾರಿ ಗುಡ್ಡ ಕುಸಿದು ಮೂವರು ಮೃತಪಟ್ಟಿದ್ದರು. ಆ ಕಹಿನೆನಪು ಹಸಿಯಾಗಿರುವಾಗಲೇ ಮತ್ತೊಂದು ಅವಘಢ ಸಂಭವಿಸಿದೆ.

ಬಿಸಲವಾಡಿಯ ಸರ್ವೆ ನಂಬರ್‌ 172ರಲ್ಲಿರುವ ಕ್ವಾರಿಯನ್ನು ರೇಣುಕಾದೇವಿ ಎಂಬುವವರು ನಡೆಸುತ್ತಿದ್ದಾರೆ. ಒಟ್ಟು 3 ಎಕರೆಯಲ್ಲಿ ಗಣಿಗಾರಿಕೆ ನಡೆಸಲು ಪರವಾನಗಿ ಪಡೆದಿದ್ದಾರೆ. ಕ್ವಾರಿಯು 250 ಅಡಿಗೂ ಹೆಚ್ಚು ಆಳವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT