ಅಡುಗೆ ಮನೆಯಿಂದ ಹಿಡಿದು ಎಲ್ಲೆಡೆ ಇಂಗ್ಲಿಷ್ ಬಳಸುತ್ತಿದ್ದೇವೆ. ಬಿಗುಮಾನ ಬಿಟ್ಟು ಎಲ್ಲಾ ಸಮಯದಲ್ಲೂ ಕನ್ನಡ ಬಳಸಿ, ಬೆಳೆಸಬೇಕು. ಕನ್ನಡಿಗರಿಗೆ ತಾಕತ್ತು, ಸ್ವಾಭಿಮಾನ ಇದ್ದರೆ ಕನ್ನಡ ಭಾಷೆ ಬಳಕೆ ಮಾಡಬೇಕು. ಕನ್ನಡ ಅನ್ನದ ಭಾಷೆಯಾದರೆ ಮಾತ್ರ ಬೆಳೆಯುತ್ತದೆ. ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣವೂ ಕನ್ನಡದಲ್ಲಿ ಸಿಗುವಂತಾಗಬೇಕು. ಉನ್ನತ ಶಿಕ್ಷಣ ಕನ್ನಡದಲ್ಲಿ ಸಿಗಬೇಕಾದರೆ ಭಾಷಾ ತಜ್ಞರ ಜವಾಬ್ದಾರಿ ಹೆಚ್ಚಿದೆ. ಇಂಗ್ಲಿಷ್ ಸೇರಿದಂತೆ ಇತರ ಭಾಷೆಗಳಲ್ಲಿರುವ ವಿಚಾರಗಳನ್ನು ಕನ್ನಡಕ್ಕೆ ಭಾಷಾಂತರಿಸಿ ಕೊಟ್ಟರೆ ಉನ್ನತ ಶಿಕ್ಷಣವನ್ನು ಮಾತೃ ಭಾಷೆಯಲ್ಲೇ ಕಲಿಸಲು ನೆರವಾಗುತ್ತದೆ ಎಂದು ಹೇಳಿದರು.