ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಪಾಲಯ್ಯರನ್ನು ಬದಲಿಸಿ ಮಂಡ್ಯ ಉಸ್ತುವಾರಿ ಸಚಿವರಾಗಿ ಸಚಿವ ಅಶೋಕ ನೇಮಕ

Last Updated 24 ಜನವರಿ 2023, 22:10 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರನ್ನು ದಿಢೀರ್‌ ಬದಲಿಸಿ, ಆ ಸ್ಥಾನಕ್ಕೆ ಕಂದಾಯ ಸಚಿವ ಕೆ. ಅಶೋಕ ಅವರನ್ನು ನೇಮಿಸಲಾಗಿದೆ.

ಹಳೆ ಮೈಸೂರು ಭಾಗದಲ್ಲಿ ಒಕ್ಕಲಿ ಗರ ಪ್ರಾಬಲ್ಯವಿದೆ. ಗೋಪಾಲಯ್ಯ ಜೆಡಿಎಸ್‌ಗೆ ದ್ರೋಹ ಬಗೆದು ಬಿಜೆಪಿ ಸೇರಿದ್ದಾರೆ ಎಂಬ ಕೋಪ ಈ ಭಾಗ ದಲ್ಲಿ‌ ದಟ್ಟವಾಗಿದೆ. ಹೀಗಾಗಿ, ಅವರನ್ನೇ ಮುಂದುವರಿಸಿದರೆ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾಗಬಹುದು ಎಂಬ
ಕಾರಣಕ್ಕೆ ಮುಖ್ಯಮಂತ್ರಿ ಈ ಬದಲಾವಣೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. ಈ ಹಿಂದೆ 2 ಬಾರಿ ಅಶೋಕ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT