ಇಂತಹ ಅನಾಥರ ಚಿತಾಭಸ್ಮ ಹಾಗೂ ಅಸ್ಥಿಯನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ಕಾವೇರಿಯಲ್ಲಿ ವಿಸರ್ಜಿಸಿದ್ದ ಸಚಿವ ಅಶೋಕ, ಮೃತರ ಅಂತ್ಯೋತ್ತರ ಕ್ರಿಯೆಗಳನ್ನು ಸಾಮೂಹಿಕವಾಗಿ ನಡೆಸಿದ್ದರು. ಕೆಲ ತಿಂಗಳುಗಳ ಹಿಂದೆ ಅಸ್ಥಿ ವಿಸರ್ಜನೆ ಮಾಡಿರುವುದರಿಂದ ಸೋಮವಾರ (ಅ.4) ವಿಷ್ಣು ಶ್ರಾದ್ಧ ನಡೆಸಲು ಅಶೋಕ ತೀರ್ಮಾನಿಸಿದ್ದಾರೆ.