<p><strong>ಬೆಂಗಳೂರು</strong>: ‘ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲು ಸಾಧ್ಯ ಇಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣಸ್ಪಷ್ಟಪಡಿಸಿದರು.</p>.<p>ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಅತಿಥಿ ಉಪನ್ಯಾಸಕರ ಸಂಘಟನೆಗಳ ಜೊತೆ ಚರ್ಚಿಸಿದ ಬಳಿಕವೇ ಗೌರವಧನ ಘೋಷಿಸಲಾಗಿದೆ. ಈಗ ಕೆಲವು ಸಂಘಟನೆಗಳು ಈ ವಿಚಾರಕ್ಕೆ ಅನಗತ್ಯವಾಗಿ ರಾಜಕೀಯ ಬಣ್ಣ ಬಳಿಯುತ್ತಿರುವುದು ಸರಿಯಲ್ಲ’ ಎಂದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಶುಕ್ರವಾರ (ಜ. 14) ಆದೇಶ ಹೊರಡಿಸಿದೆ.</p>.<p>ಗೌರವಧನ ಹೆಚ್ಚಿಸಿದ ಬಳಿಕವೂ ಮುಷ್ಕರದಿಂದ ಹಿಂದೆಸರಿಯುವುದಿಲ್ಲವೆಂದು ಅತಿಥಿ ಉಪನ್ಯಾಸಕರು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದಾರೆ. ಈ ಪೈಕಿ, 4,500 ಮಂದಿ ಮಾತ್ರ ಯುಜಿಸಿ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ಹೊಂದಿದ್ದಾರೆ’ ಎಂದಿದ್ದಾರೆ.</p>.<p>ಸರ್ಕಾರ ಅವರ ವೇತನವನ್ನು ಗೌರವಾರ್ಹವಾಗಿ ಹೆಚ್ಚಿಸಬೇಕೆಂದು ಮುಷ್ಕರನಿರತ ಸಂಘಟನೆಗಳೇ ಹೇಳಿದ್ದವು. ಅದಕ್ಕೆ ಸ್ಪಂದಿಸಿ, ದುಪ್ಪಟ್ಟಿಗಿಂತಲೂ ಹೆಚ್ಚು ವೇತನ ಏರಿಸಲಾಗಿದೆ. ಇಷ್ಟಾದ ಮೇಲೆಯೂ ಅತಿಥಿ ಉಪನ್ಯಾಸಕರು ಹಠ ಹಿಡಿದಿರುವುದು ಬೇಸರದ ಸಂಗತಿ’ ಎಂದರು.</p>.<p><a href="https://www.prajavani.net/india-news/subramanian-swamy-narendra-modi-pope-inida-902644.html" itemprop="url">ಮೋದಿಯಿಂದ ಪೋಪ್ಗೆ ಆಹ್ವಾನ: ಪ್ರಶಂಸೆಯೋ? ಕೀಳರಿಮೆಯೋ?: ಸುಬ್ರಮಣಿಯನ್ ಸ್ವಾಮಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲು ಸಾಧ್ಯ ಇಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣಸ್ಪಷ್ಟಪಡಿಸಿದರು.</p>.<p>ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಅತಿಥಿ ಉಪನ್ಯಾಸಕರ ಸಂಘಟನೆಗಳ ಜೊತೆ ಚರ್ಚಿಸಿದ ಬಳಿಕವೇ ಗೌರವಧನ ಘೋಷಿಸಲಾಗಿದೆ. ಈಗ ಕೆಲವು ಸಂಘಟನೆಗಳು ಈ ವಿಚಾರಕ್ಕೆ ಅನಗತ್ಯವಾಗಿ ರಾಜಕೀಯ ಬಣ್ಣ ಬಳಿಯುತ್ತಿರುವುದು ಸರಿಯಲ್ಲ’ ಎಂದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಶುಕ್ರವಾರ (ಜ. 14) ಆದೇಶ ಹೊರಡಿಸಿದೆ.</p>.<p>ಗೌರವಧನ ಹೆಚ್ಚಿಸಿದ ಬಳಿಕವೂ ಮುಷ್ಕರದಿಂದ ಹಿಂದೆಸರಿಯುವುದಿಲ್ಲವೆಂದು ಅತಿಥಿ ಉಪನ್ಯಾಸಕರು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದಾರೆ. ಈ ಪೈಕಿ, 4,500 ಮಂದಿ ಮಾತ್ರ ಯುಜಿಸಿ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ಹೊಂದಿದ್ದಾರೆ’ ಎಂದಿದ್ದಾರೆ.</p>.<p>ಸರ್ಕಾರ ಅವರ ವೇತನವನ್ನು ಗೌರವಾರ್ಹವಾಗಿ ಹೆಚ್ಚಿಸಬೇಕೆಂದು ಮುಷ್ಕರನಿರತ ಸಂಘಟನೆಗಳೇ ಹೇಳಿದ್ದವು. ಅದಕ್ಕೆ ಸ್ಪಂದಿಸಿ, ದುಪ್ಪಟ್ಟಿಗಿಂತಲೂ ಹೆಚ್ಚು ವೇತನ ಏರಿಸಲಾಗಿದೆ. ಇಷ್ಟಾದ ಮೇಲೆಯೂ ಅತಿಥಿ ಉಪನ್ಯಾಸಕರು ಹಠ ಹಿಡಿದಿರುವುದು ಬೇಸರದ ಸಂಗತಿ’ ಎಂದರು.</p>.<p><a href="https://www.prajavani.net/india-news/subramanian-swamy-narendra-modi-pope-inida-902644.html" itemprop="url">ಮೋದಿಯಿಂದ ಪೋಪ್ಗೆ ಆಹ್ವಾನ: ಪ್ರಶಂಸೆಯೋ? ಕೀಳರಿಮೆಯೋ?: ಸುಬ್ರಮಣಿಯನ್ ಸ್ವಾಮಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>