ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಮಸಾಲಿ ಮೀಸಲಾತಿ ಹೋರಾಟ; ಸರ್ಕಾರದಿಂದ ಸಕಾರಾತ್ಮಕ ಹೆಜ್ಜೆ: ಸಿ.ಸಿ.ಪಾಟೀಲ ಭರವಸೆ

Last Updated 12 ಆಗಸ್ಟ್ 2021, 6:13 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪಂಚಮಸಾಲಿ ಮೀಸಲಾತಿ ಹೋರಾಟದ ಭಾಗವಾಗಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ದುಂಡು ಮೇಜಿನ ಸಭೆಯಲ್ಲಿ ನಾನು ಭಾಗವಹಿಸುವುದಿಲ್ಲ. ಸ್ವಾಮೀಜಿ ಹೋರಾಟದ ಬಗ್ಗೆ ಸರ್ಕಾರಕ್ಕೆ ಮಾಹಿತಿ ಇದ್ದು, ಮುಂದೆ ಸಕಾರಾತ್ಮಕ ಹೆಜ್ಜೆಯನ್ನು ಇಡಲಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಭರವಸೆ ನೀಡಿದರು.

ಪಂಚಮಸಾಲಿ‌ ಮೀಸಲಾತಿಗಾಗಿ ಹುಬ್ಬಳ್ಳಿಯಲ್ಲಿ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಗುರುವಾರ ಆಯೋಜಿಸಿರುವ ಚಳವಳಿಗಾರರ ದುಂಡು ಮೇಜಿನ ಸಭೆಗೆ ಮುನ್ನ, ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಾನು ಮಾತಾಡುವುದಿಲ್ಲ. ಕೆಲಸ ಮಾಡಿ ತೋರಿಸುವೆ. ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ, ಆಗಸ್ಟ್ 15ರ ಬಳಿಕ ಮುಖ್ಯಮಂತ್ರಿ ಮತ್ತು ಸ್ವಾಮೀಜಿ ಭೇಟಿಗೆ ವ್ಯವಸ್ಥೆ ಮಾಡುವೆ. ಸರ್ಕಾರದಿಂದ ಸಮಾಜದ ಬೇಡಿಕೆ ಈಡೇರಲಿದ್ದು, ಸಮುದಾಯದವರು ತಾಳ್ಮೆಯಿಂದ ಕಾಯಬೇಕು ಎಂದು ಮನವಿ ಮಾಡಿದರು.

ಸಭೆ ಆರಂಭಕ್ಕೂ ಮುಂಚೆಯೇ ಅವರು ಸ್ವ ಕ್ಷೇತ್ರ ನರಗುಂದಕ್ಕೆ ಪ್ರಯಾಣ ಬೆಳೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT