ಈ ಕುರಿತು ಹೆಚ್ಚಿನ ಚರ್ಚೆಗಾಗಿ ಬೆಂಗಳೂರಿಗೆ ಬರುವಂತೆ ನಿಯೋಗದ ಸದಸ್ಯರನ್ನು ಆಹ್ವಾನಿಸಿದರು. ಸಮಾಜದಲ್ಲಿ ವಿನ್ಯಾಸದ ಬಗ್ಗೆ ಜಾಗೃತಿ ಮೂಡಿಸಿ, ಈ ಜ್ಞಾನಧಾರೆಗೆ ಬೇಡಿಕೆ ಸೃಷ್ಟಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡುವುದು ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿಬೆಂಗಳೂರು ಡಿಸೈನ್ ಡಿಸ್ಟ್ರಿಕ್ಟ್ ಸ್ಥಾಪನೆ ನೆರವಾಗಲಿದೆ. ಮೊದಲಿಗೆ, ಪ್ರಾಯೋಗಿಕವಾಗಿ ಆಯ್ದ ಶಾಲೆಗಳಲ್ಲಿ ಡಿಸೈನ್ ಬೋಧನೆಗೆ ಚಾಲನೆ ನೀಡಬಹುದು. ಇದರ ಫಲಿತಾಂಶ ಆಧರಿಸಿ, ನಂತರ ರಾಜ್ಯಾದ್ಯಂತ ವಿಸ್ತರಿಸಬಹುದು. ರಾಜ್ಯದ ಐಟಿ ಇಲಾಖೆಯೇ ನೂತನ ವಿನ್ಯಾಸ ನೀತಿ ರೂಪಿಸಲಿದೆ ಎಂದು ವಿವರಿಸಿದರು. ನಿಯೋಗದಲ್ಲಿದ್ದ ಡಬ್ಲ್ಯುಡಿಸಿ ಮುಖ್ಯಸ್ಥೆ ಪೌಲಾ ಗ್ರಹಾಂ ಗೆಜಾರ್ಡ್ ಮಾತನಾಡಿದರು.