ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿಯವರು ವಿಧಾನಪರಿಷತ್ನಲ್ಲಿ ಬಿಜೆಪಿಯೊಂದಿಗೆ ಸೇರಿ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಮಾಡಿದರು. ಆದರೆ, ಮೈಸೂರು ಪಾಲಿಕೆಯಲ್ಲಿ ಕಾಂಗ್ರೆಸ್ ಜೊತೆಗೆ ಕೈಜೋಡಿಸಿದರು. ಹೀಗಾಗಿ, ಅವರನ್ನು ನಂಬಬೇಡಿ ಎಂದು ನಮ್ಮ ಪಕ್ಷದವರಿಗೆ ಹೇಳುತ್ತೇನೆ. ಇದರಿಂದ ನಮ್ಮ ಪಕ್ಷದ ಬೆಳವಣಿಗೆಗೆ ಹಿನ್ನಡೆಯಾಗುತ್ತದೆ’ ಎಂದು ಹೇಳಿದರು.